ಬೆಂಗಳೂರು: ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ಸಿಖ್ ಧರ್ಮದ ಸಮುದಾಯಗಳೆಲ್ಲವೂ ಅನ್ಯೋನ್ಯತೆಯಿಂದ ಬಾಳಲಿ ಹಾಗೂ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ಸುಧಾರಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಸಚಿವ ಬಿ.ಜೆಡ್.ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇಂದು(ಮಾರ್ಚ್.31) ರಂಜಾನ್ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದ ಜನತೆಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ಮೂವತ್ತು ದಿನಗಳ ಕಾಲ ಉಪವಾಸದಿಂದ ಇದ್ದೇವೆ. ನಿನ್ನೆ ಹಿಂದೂಗಳಿಗೆ ಹೊಸ ವರ್ಷವಾಗಿರುವ ಯುಗಾದಿ ಹಬ್ಬವಾದರೆ, ಇಂದು ನಮಗೆ ರಂಜಾನ್ ದೊಡ್ಡ ಹಬ್ಬವಾಗಿದೆ. ಈ ಭಾರತದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ಸಿಖ್ ಧರ್ಮದ ಸಮುದಾಯಗಳೆಲ್ಲವೂ ಅನ್ಯೋನ್ಯತೆಯಿಂದ ಬಾಳಲಿ ಎಂದು ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಹೇಳಿದರು.
ಇನ್ನು ಇಂದು ಸುಮಾರು ಬೆಳಿಗ್ಗೆ 9.35 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರ ಫೋನ್ ಮಾಡಿ ರಂಜಾನ್ ಹಬ್ಬದ ವಿಶ್ ಮಾಡಿದ್ದಾರೆ. ಅಲ್ಲದೇ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಈ ಹಬ್ಬದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಹೀಗಾಗಿ ಅವರ ಆರೋಗ್ಯ ಆದಷ್ಟು ಬೇಗ ಚೇತರಿಕೆ ಕಾಣಲಿ ಎಂದು ಪ್ರಾರ್ಥನೆ ಸಲ್ಲಿಸಿದೆ ಎಂದರು.
ಇದೇ ಸಂದರ್ಭದಲ್ಲಿ ಮುಸ್ಲಿಂ ಭಾಂದವರು ಕಪ್ಪು ಪಟ್ಟಿ ಧರಿಸಿ ಸಾಮಾಹಿಕ ಪ್ರಾರ್ಥನೆ ಸಲ್ಲಿಸಿರುವ ವಿಚಾರವಾಗಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಇವತ್ತು ಕಪ್ಪು ಪಟ್ಟಿ ಧರಿಸಿದ್ದೇವೆ. ವಕ್ಫ್ ಮಸೂದೆ ತರಬಾರದು ಎಂಬುದು ನಮ್ಮ ಬೇಡಿಕೆಯಾಗಿದೆ. ಆದರೆ ಇದಕ್ಕೆ ನಮ್ಮ ರಾಜ್ಯ ಸರ್ಕಾರದಿಂದ ಬೆಂಬಲವಿಲ್ಲ ಎಂದು ತಿಳಿಸಿದರು.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…