ಹಾಸನ: ಕಾಂಗ್ರೆಸ್ ಸರ್ಕಾರದಿಂದ ನಾಳೆ(ಡಿ.5) ನಡೆಸಲಾಗುವ ಜನಕಲ್ಯಾಣ ಸಮಾವೇಶದ ಕುರಿತು ಮೊದಲ ಬಾರಿಗೆ ಹೊಳೆನರಸೀಪುರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಇಂದು(ಡಿ.4) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದಲ್ಲಿ ಕಾಂಗ್ರೆಸ್ ಸರ್ಕಾರ ಸಮಾವೇಶ ಮಾಡಿದರೆ ಮಾಡಿಕೊಳ್ಳಲಿ. ನಾವು ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಈ ಸಮಾವೇಶಕ್ಕೆ 2028ರ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಹಾಸನದಲ್ಲಿ ಜೆಡಿಎಸ್ ಅನ್ನು ಟಾರ್ಗೆಟ್ ಮಾಡಿದರೆ ಮಾಡಲಿ. 50 ವರ್ಷಗಳಿಂದ ನಮ್ಮ ಜಿಲ್ಲೆಗೆ ಕಾಂಗ್ರೆಸ್ನಿಂದ ಯಾವ ಕೊಡುಗೆಯೂ ಇಲ್ಲ. 2018ರ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಏನಾಯ್ತು? ಕಾಂಗ್ರೆಸ್ನವರು ಕೊನೆಗೆ ಎಚ್.ಡಿ.ದೇವೇಗೌಡರ ಬಳಿ ಬರಬೇಕಾಯ್ತು. ಮುಂದಿನ ಚುನಾವಣೆಗೆ ಹಾಸನದಲ್ಲಿ ನಾವು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಸೇರಿ ಮತ್ತೆ ಜೆಡಿಎಸ್ ಅನ್ನು ಅಧಿಕಾರಕ್ಕೆ ತಂದೇ ತರುತ್ತೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…