ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿದ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರ ಹೋರಾಟ ಮತ್ತೆ ತೀವ್ರಗೊಂಡಿದೆ.
ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಕ್ಷಮೆ ಕೋರುವಂತೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ.
ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಹಾಗೂ ಪಂಚಮಸಾಲಿಗಳ ಹೋರಾಟ ಸಂವಿಧಾನ ವಿರೋಧಿ ಎಂದಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆ ಹಿಂಪಡೆಯುವಂತೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಳಗಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಪಂಚಮಸಾಲಿ ಮುಖಂಡರು ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದರು.
ಈ ವೇಳೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಧರಣಿ ನಡೆಸಲು ಅವಕಾಶ ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಹೋರಾಟಗಾರರು ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು, ಹೋರಾಟ ತಡೆಯುವುದು ಅವರ ಹವ್ಯಾಸ. ಆದರೆ ಹೋರಾಟ ಮಾಡುವುದು ನಮ್ಮ ಆದ್ಯ ಕರ್ತವ್ಯ. ಸಿಎಂ ಸಿದ್ದರಾಮಯ್ಯ ಅವರು ಕ್ಷಮೆ ಕೇಳಬೇಕು. ಲಾಠಿ ಚಾರ್ಜ್ ಮಾಡಿರುವ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…