ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಜಯಮೃತ್ಯುಂಜಯ ಸ್ವಾಮೀಜಿ ಕಿಡಿ

ಬೆಳಗಾವಿ: 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

ಘಟನೆಯಲ್ಲಿ 12 ಮಂದಿ ಪೊಲೀಸರು ಹಾಗೂ 6 ಮಂದಿ ಹೋರಾಟಗಾರರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಬೆಳಗಾವಿ ಬಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು, 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಪಂಚಮಸಾಲಿ ಹೋರಾಟ ಶಾಂತಿಯುತವಾಗಿತ್ತು. ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಬರಬೇಕು ಎಂದು ಆಗ್ರಹ ಇತ್ತು. ಆದ್ರೆ ಸ್ಥಳಕ್ಕೆ ಬಂದ ಸಚಿವರ ಮಾತು ಸಮಾಧಾನ ತರಲಿಲ್ಲ. ಹಾಗಾಗಿ ನಾವು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದೆವು. ಆದ್ರೆ ಅಲ್ಲಿದ್ದ ಪೊಲೀಸರು ಲಾಠಿ ಚಾರ್ಜ್‌ ಮಾಡಿದರು. ಲಾಠಿ ಚಾರ್ಜ್‌ನಿಂದ ಬಹಳಷ್ಟು ಜನರ ಕೈಕಾಲು ಮುರಿದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

32 mins ago

ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ: ವಿಜಯೇಂದ್ರ ಆಕ್ರೋಶ

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…

44 mins ago

ಧುರಂಧರ್‌-2 ಚಿತ್ರ ವೀಕ್ಷಿಸಿ ನಟಿ ರಮ್ಯಾ ಗರಂ: ಫ್ಯಾನ್ಸ್‌ಗೆ ಏನಂದು ಗೊತ್ತಾ?

ಬಹುನಿರೀಕ್ಷಿತ ಧುರಂಧರ್‌-2 ಸಿನಿಮಾ ಬಗ್ಗೆ ನಟಿ ರಮ್ಯಾ ಬರೆದಿರುವ ಟೂ ಪೇಜ್‌ ವಿಮರ್ಶೆ ಈಗ ಸೋಚಷಿಯಲ್‌ ಮೀಡಿಯಾದಲ್ಲಿ ಕಿಚ್ಚು ಹಬ್ಬಿಸಿದೆ.…

1 hour ago

ಕಬಿನಿ ಕಾಡಿನಲ್ಲಿ ಹುಲಿಗಳ ಸ್ವಚ್ಛಂದ ವಿಹಾರ: ವಿಡಿಯೋ ವೈರಲ್‌

ಎಚ್.ಡಿ.ಕೋಟೆ: ಕಬಿನಿ ಕಾಡಿನಲ್ಲಿ ಹುಲಿ ಮರಿಗಳು ಮಣ್ಣಿನ ವಾಸನೆ ಸವಿದು ಮೈಮರೆತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ.…

1 hour ago

ಮಂಡ್ಯ| ಮೂರು ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಕೊನೆಗೂ ಸೆರೆ

ಮಂಡ್ಯ: ತಾಲ್ಲೂಕಿನ ಭೂತನಹೊಸೂರು ಗ್ರಾಮದ ಸಮೀಪದ ಕಬ್ಬಿನ ಗದ್ದಯೊಂದರಲ್ಲಿ ಪತ್ತೆಯಾಗಿದ್ದ ಮೂರು ಚಿರತೆ ಮರಿಗಳಿಂದ ದೂರವಾಗಿದ್ದ ತಾಯಿ ಚಿರತೆ ಬೋನಿನಲ್ಲಿ…

2 hours ago

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆಹಾರ ರೈಸ್‌ಮಿಲ್‌ನಲ್ಲಿ ಪತ್ತೆ

ಕೆ.ಆರ್‌.ಪೇಟೆ: ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನು ರೈಸ್‌ಮಿಲ್‌ನಲ್ಲಿ ಪತ್ತೆಯಾಗಿದೆ. ಮಾರ್ಚ್.‌17ರಂದು ರೈತ…

2 hours ago