ರಾಜ್ಯ

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ ಜಾ.ದಳ ಸಮಾವೇಶ ಒಂದು ರೀತಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಮಾರ್ಪಟ್ಟಿತು.

ಪ್ರಾದೇಶಿಕ ಹಿನ್ನೆಲೆ ಹೊಂದಿರುವ ಜಾ.ದಳಕ್ಕೆ 25 ವರ್ಷ ತುಂಬಿದ್ದರಿಂದ ಬೆಳ್ಳಿಹಬ್ಬದ ಹಿನ್ನೆಲೆಯಲ್ಲಿ ಐತಿಹಾಸಿಕ ಸಮಾವೇಶ ಆಯೋಜಿಸಲಾಗಿತ್ತು. ಈ ಮೂಲಕ ಮುಂದಿನ ಚುನಾವಣೆಗಳಿಗೆ ತಯಾರಾಗುವಂತೆ ಕಾರ್ಯಕರ್ತರಿಗೆ ಜಾ.ದಳ ಮುಖಂಡರು ಕರೆ ನೀಡಿದರು.

ಹಬ್ಬದ ರೀತಿಯಲ್ಲಿ ನಡೆದ ಕಾರ‍್ಯಕ್ರಮದಲ್ಲಿ ಜಾ.ದಳ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು, ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದರು. ಜಾ.ದಳ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು.

ಮುಂದಿನ ದಿನಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲಿ ಸಮಾವೇಶ ನಡೆಸುತ್ತೇವೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿ ಪ್ರಥಮ ಬೆಳ್ಳಿಹಬ್ಬ ಆಚರಣೆ ಮಾಡಲು ನಿರ್ಧಾರ ಮಾಡಿದ್ದೆವು. ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಮಾರ್ಗದರ್ಶನದಲ್ಲಿ ಜಿಲ್ಲೆಯ ಪ್ರಮುಖ ನಾಯಕರು, ಮಾಜಿ ಶಾಸಕರು ಎಲ್ಲಾಸೇರಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಜತೆಗೂಡಿ ಸಮಾವೇಶವನ್ನು ಐತಿಹಾಸಿಕಗೊಳಿಸಿದ್ದೀರಿ ಇದಕ್ಕೆ ಕಾರ್ಯಕರ್ತರ ಶಕ್ತಿಯೇ ಕಾರಣ ಎಂದು ಎಚ್ಡಿಕೆ ಬಣ್ಣಿಸಿದರು.

ಹಾಸನ ಜಿಲ್ಲೆಯಲ್ಲಿ ಜಾ.ದಳ ಮುಗಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಮುಖ್ಯಮಂತ್ರಿ ಒಳಗೊಂಡಂತೆ ಎರಡು ಸಮಾವೇಶ ಮಾಡಿದ್ದಾರೆ. ಕಳೆದ ಎರಡೂವರೆ ವರ್ಷದಿಂದ ಏನೇನು ನಡೆದಿದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಜಿಲ್ಲೆಯ ಪುಣ್ಯಭೂಮಿಯ ಮಣ್ಣಿನಲ್ಲಿ ದೇವೇಗೌಡರು ಜನಿಸಿದವರು. ಸೊಸೈಟಿ ಚುನಾವಣೆಯಿಂದ 62 ವರ್ಷಗಳು ರಾಜಕೀಯದಲ್ಲಿ ಕಳೆದಿದ್ದಾರೆ. 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದರು. ಜಿಲ್ಲೆಯ ಜನರ ಆಶೀರ್ವಾದದಿಂದ ಸಾಮಾನ್ಯ ರೈತನ ಮಗ ಕೆಂಪುಕೋಟೆ ಮೇಲೆ ಬಾವುಟ ಹಾರಿಸುವ ಅವಕಾಶ ಸಿಕ್ಕಿದ್ದು, ಜಿಲ್ಲೆಯ ಜನರು ನೀಡಿರುವ ಶಕ್ತಿ. ಜಿಲ್ಲೆಯ ಜನರಿಗೂ ದೇವೇಗೌಡರಿಗೂ ಅವಿನಾಭಾವ ಸಂಬಂಧ ಇದೆ ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕು ಎಂಬ ಸೂಚನೆಯನ್ನು ಸರ್ವೋಚ್ಚ ನ್ಯಾಯಾಲಯ ನೀಡಿದೆ. ಬೆಂಗಳೂರು ಜಿಬಿಎ, ಗ್ರಾಪಂಗಳ ಚುನಾವಣೆ ಆಗಬೇಕಿದೆ. ಜಿಪಂ, ತಾಪಂ ಚುನಾವಣೆ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

6 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

6 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

6 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

6 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

6 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago