ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಸರಿಡಲು ಜೆಡಿಎಸ್ ವಿರೋಧ ವ್ಯಕ್ತಪಡಿಸಿದ್ದು, ಬೆಂಗಳೂರು ವಿವಿ ನಿಮ್ಮ ಮನೆತನ ಆಸ್ತಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಜೆಡಿಎಸ್ ಪಕ್ಷವು, ಬೆಂಗಳೂರು ಎಂಬುದು ಈ ನೆಲಮೂಲದ ಹೆಗ್ಗುರುತು. ಸಮಸ್ತ ಕನ್ನಡಿಗರ ಹೆಮ್ಮೆ ಹಾಗೂ ಕನ್ನಡಿಗರ ಪ್ರತಿಧ್ವನಿ. ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದ ನಗರ. ಬೆಂಗಳೂರು ಎಂಬುದೇ ಒಂದು ವಿಶ್ವ ಪ್ರಸಿದ್ಧ ಬ್ರ್ಯಾಂಡ್. ಅದೇ ಬೆಂಗಳೂರು ಹೆಸರಿಗೆ ಇರುವ ಶಕ್ತಿ.
ನಮಗೆ ಡಾ.ಮನಮೋಹನ್ ಸಿಂಗ್ ಅವರ ಮೇಲೆ ಅಪಾರವಾದ ಗೌರವವಿದೆ. ಆದರೆ “ಬೆಂಗಳೂರು ನಗರ ವಿವಿ”ಗೆ ಪರ್ಯಾಯವಾಗಿ ಬೇರೆ ಯಾವುದೇ ಹೆಸರಿಡಲು ತೀವ್ರ ವಿರೋಧವಿದೆ. ಈ ವಿಚಾರದಲ್ಲಿ ಕರ್ನಾಟಕದ ಜನತೆಯೂ ಸಹ ಕಾಂಗ್ರೆಸ್ ಸರ್ಕಾರದ ಈ ನಿರ್ಧಾರವನ್ನು ಒಪ್ಪುವುದಿಲ್ಲ.
ರಾಜ್ಯದಲ್ಲಿ ಕನ್ನಡ ಭಾಷೆ, ನೆಲ, ಜಲ ನಾಡಿಗಾಗಿ ಹೋರಾಡಿದ ಸಾವಿರಾರು ಕನ್ನಡಿಗ ಸಾಧಕರು ಇದ್ದಾರೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಕರ್ನಾಟಕಕ್ಕೆ ಕೀರ್ತಿ ತಂದ ಮಹನೀಯರಿದ್ದಾರೆ. ಆ ಕನ್ನಡಿಗರು ಕಾಂಗ್ರೆಸ್ಸಿಗರ ಕಣ್ಣಿಗೆ ಬೀಳಲಿಲ್ಲವೇ? ಎಂದು ಪ್ರಶ್ನೆ ಮಾಡಿದೆ.
ಸಿದ್ದರಾಮಯ್ಯನವರೇ ಅಷ್ಟು ಅಭಿಮಾನ, ಗೌರವ ಇದ್ದರೆ ಮೈಸೂರಿನಲ್ಲಿ ನಿರ್ಮಿಸುತ್ತಿರುವ ನಿಮ್ಮ ಹೊಸ ಮನೆಗೆ ಮನಮೋಹನ್ ಸಿಂಗ್ ನಿವಾಸ ಎಂದು ಹೆಸರಿಟ್ಟುಕೊಳ್ಳಿ. ನಿಮ್ಮ ಸೊಸೆಯ ಒಡೆತನದಲ್ಲಿರುವ ಬಹುಕೋಟಿ ಮೌಲ್ಯದ ಐಶಾರಾಮಿ ಕ್ಲಬ್ಗೆ ಮರು ನಾಮಕರಣ ಮಾಡಿಕೊಳ್ಳಿ.
ದೆಹಲಿಯ ಹೊಸದಾಗಿ ನಿರ್ಮಿಸಿದ ಕಾಂಗ್ರೆಸ್ ಕಚೇರಿಗೆ “ಇಂದಿರಾ ಭವನ” ಎಂದು ಹೆಸರಿಟ್ಟಿರಿ. ಅದಕ್ಕೆ ಮನಮೋಹನ್ ಸಿಂಗ್ ಹೆಸರಿಡಲು ಇಟಲಿ ಕಾಂಗ್ರೆಸ್ನ ಆಪ್ತರ ಗುಂಪು ಒಪ್ಪಲಿಲ್ಲ ಎಂಬುದು ತಮಗೆ ತಿಳಿದಿರುವ ವಿಷಯ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತವಿರುವ ಕಾರಣ “ಗುಲಾಮಿ ಕಾಂಗ್ರೆಸ್” ನಾಯಕರು, ಬೆಂಗಳೂರಿನಲ್ಲಿ ಬೇಳೆ ಬೇಯಿಸಿಕೊಳ್ಳುತ್ತೀರಿ.
ಕೆಲ ತಿಂಗಳ ಹಿಂದಷ್ಟೆ ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಕಂಚಿನ ಪ್ರತಿಮೆ ಅನಾವರಣಗೊಳಿಸಲಾಗಿತ್ತು. ಈಗ ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು ನಾಮಕರಣ ಮಾಡುವುದಾಗಿ ಘೋಷಿಸಿದ್ದೀರಿ ಎಂದು ಕಿಡಿಕಾರಿದೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…