ರಾಜ್ಯ

ಬೆಂಗಳೂರು ವಿವಿಗೆ ಮನಮೋಹನ್‌ ಸಿಂಗ್‌ ಹೆಸರಿಡಲು ಜೆಡಿಎಸ್‌ ವಿರೋಧ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಹೆಸರಿಡಲು ಜೆಡಿಎಸ್‌ ವಿರೋಧ ವ್ಯಕ್ತಪಡಿಸಿದ್ದು, ಬೆಂಗಳೂರು ವಿವಿ ನಿಮ್ಮ ಮನೆತನ ಆಸ್ತಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಜೆಡಿಎಸ್‌ ಪಕ್ಷವು, ಬೆಂಗಳೂರು ಎಂಬುದು ಈ ನೆಲಮೂಲದ ಹೆಗ್ಗುರುತು. ಸಮಸ್ತ ಕನ್ನಡಿಗರ ಹೆಮ್ಮೆ ಹಾಗೂ ಕನ್ನಡಿಗರ ಪ್ರತಿಧ್ವನಿ. ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದ ನಗರ. ಬೆಂಗಳೂರು ಎಂಬುದೇ ಒಂದು ವಿಶ್ವ ಪ್ರಸಿದ್ಧ ಬ್ರ್ಯಾಂಡ್. ಅದೇ ಬೆಂಗಳೂರು ಹೆಸರಿಗೆ ಇರುವ ಶಕ್ತಿ.

ನಮಗೆ ಡಾ.ಮನಮೋಹನ್ ಸಿಂಗ್ ಅವರ ಮೇಲೆ ಅಪಾರವಾದ ಗೌರವವಿದೆ. ಆದರೆ “ಬೆಂಗಳೂರು ನಗರ ವಿವಿ”ಗೆ ಪರ್ಯಾಯವಾಗಿ ಬೇರೆ ಯಾವುದೇ ಹೆಸರಿಡಲು ತೀವ್ರ ವಿರೋಧವಿದೆ. ಈ ವಿಚಾರದಲ್ಲಿ ಕರ್ನಾಟಕದ ಜನತೆಯೂ ಸಹ ಕಾಂಗ್ರೆಸ್ ಸರ್ಕಾರದ ಈ ನಿರ್ಧಾರವನ್ನು ಒಪ್ಪುವುದಿಲ್ಲ.

ರಾಜ್ಯದಲ್ಲಿ ಕನ್ನಡ ಭಾಷೆ, ನೆಲ, ಜಲ ನಾಡಿಗಾಗಿ ಹೋರಾಡಿದ ಸಾವಿರಾರು ಕನ್ನಡಿಗ ಸಾಧಕರು ಇದ್ದಾರೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಕರ್ನಾಟಕಕ್ಕೆ ಕೀರ್ತಿ ತಂದ ಮಹನೀಯರಿದ್ದಾರೆ. ಆ ಕನ್ನಡಿಗರು ಕಾಂಗ್ರೆಸ್ಸಿಗರ ಕಣ್ಣಿಗೆ ಬೀಳಲಿಲ್ಲವೇ? ಎಂದು ಪ್ರಶ್ನೆ ಮಾಡಿದೆ.

ಸಿದ್ದರಾಮಯ್ಯನವರೇ ಅಷ್ಟು ಅಭಿಮಾನ, ಗೌರವ ಇದ್ದರೆ ಮೈಸೂರಿನಲ್ಲಿ ನಿರ್ಮಿಸುತ್ತಿರುವ ನಿಮ್ಮ ಹೊಸ ಮನೆಗೆ ಮನಮೋಹನ್ ಸಿಂಗ್ ನಿವಾಸ ಎಂದು ಹೆಸರಿಟ್ಟುಕೊಳ್ಳಿ. ನಿಮ್ಮ ಸೊಸೆಯ ಒಡೆತನದಲ್ಲಿರುವ ಬಹುಕೋಟಿ ಮೌಲ್ಯದ ಐಶಾರಾಮಿ ಕ್ಲಬ್‌ಗೆ ಮರು ನಾಮಕರಣ ಮಾಡಿಕೊಳ್ಳಿ.

ದೆಹಲಿಯ ಹೊಸದಾಗಿ ನಿರ್ಮಿಸಿದ ಕಾಂಗ್ರೆಸ್‌ ಕಚೇರಿಗೆ “ಇಂದಿರಾ ಭವನ”‌ ಎಂದು ಹೆಸರಿಟ್ಟಿರಿ. ಅದಕ್ಕೆ ಮನಮೋಹನ್‌ ಸಿಂಗ್‌ ಹೆಸರಿಡಲು ಇಟಲಿ ಕಾಂಗ್ರೆಸ್‌ನ ಆಪ್ತರ ಗುಂಪು ಒಪ್ಪಲಿಲ್ಲ ಎಂಬುದು ತಮಗೆ ತಿಳಿದಿರುವ ವಿಷಯ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತವಿರುವ ಕಾರಣ “ಗುಲಾಮಿ ಕಾಂಗ್ರೆಸ್‌” ನಾಯಕರು, ಬೆಂಗಳೂರಿನಲ್ಲಿ ಬೇಳೆ ಬೇಯಿಸಿಕೊಳ್ಳುತ್ತೀರಿ.

ಕೆಲ ತಿಂಗಳ ಹಿಂದಷ್ಟೆ ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಕಂಚಿನ ಪ್ರತಿಮೆ ಅನಾವರಣಗೊಳಿಸಲಾಗಿತ್ತು. ಈಗ ಬೆಂಗಳೂರು ವಿವಿಗೆ ಮನಮೋಹನ್‌ ಸಿಂಗ್‌ ಹೆಸರು ನಾಮಕರಣ ಮಾಡುವುದಾಗಿ ಘೋಷಿಸಿದ್ದೀರಿ ಎಂದು ಕಿಡಿಕಾರಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

9 mins ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

22 mins ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

41 mins ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

56 mins ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

1 hour ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

1 hour ago