ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಸರಿಡಲು ಜೆಡಿಎಸ್ ವಿರೋಧ ವ್ಯಕ್ತಪಡಿಸಿದ್ದು, ಬೆಂಗಳೂರು ವಿವಿ ನಿಮ್ಮ ಮನೆತನ ಆಸ್ತಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಜೆಡಿಎಸ್ ಪಕ್ಷವು, ಬೆಂಗಳೂರು ಎಂಬುದು ಈ ನೆಲಮೂಲದ ಹೆಗ್ಗುರುತು. ಸಮಸ್ತ ಕನ್ನಡಿಗರ ಹೆಮ್ಮೆ ಹಾಗೂ ಕನ್ನಡಿಗರ ಪ್ರತಿಧ್ವನಿ. ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದ ನಗರ. ಬೆಂಗಳೂರು ಎಂಬುದೇ ಒಂದು ವಿಶ್ವ ಪ್ರಸಿದ್ಧ ಬ್ರ್ಯಾಂಡ್. ಅದೇ ಬೆಂಗಳೂರು ಹೆಸರಿಗೆ ಇರುವ ಶಕ್ತಿ.
ನಮಗೆ ಡಾ.ಮನಮೋಹನ್ ಸಿಂಗ್ ಅವರ ಮೇಲೆ ಅಪಾರವಾದ ಗೌರವವಿದೆ. ಆದರೆ “ಬೆಂಗಳೂರು ನಗರ ವಿವಿ”ಗೆ ಪರ್ಯಾಯವಾಗಿ ಬೇರೆ ಯಾವುದೇ ಹೆಸರಿಡಲು ತೀವ್ರ ವಿರೋಧವಿದೆ. ಈ ವಿಚಾರದಲ್ಲಿ ಕರ್ನಾಟಕದ ಜನತೆಯೂ ಸಹ ಕಾಂಗ್ರೆಸ್ ಸರ್ಕಾರದ ಈ ನಿರ್ಧಾರವನ್ನು ಒಪ್ಪುವುದಿಲ್ಲ.
ರಾಜ್ಯದಲ್ಲಿ ಕನ್ನಡ ಭಾಷೆ, ನೆಲ, ಜಲ ನಾಡಿಗಾಗಿ ಹೋರಾಡಿದ ಸಾವಿರಾರು ಕನ್ನಡಿಗ ಸಾಧಕರು ಇದ್ದಾರೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಕರ್ನಾಟಕಕ್ಕೆ ಕೀರ್ತಿ ತಂದ ಮಹನೀಯರಿದ್ದಾರೆ. ಆ ಕನ್ನಡಿಗರು ಕಾಂಗ್ರೆಸ್ಸಿಗರ ಕಣ್ಣಿಗೆ ಬೀಳಲಿಲ್ಲವೇ? ಎಂದು ಪ್ರಶ್ನೆ ಮಾಡಿದೆ.
ಸಿದ್ದರಾಮಯ್ಯನವರೇ ಅಷ್ಟು ಅಭಿಮಾನ, ಗೌರವ ಇದ್ದರೆ ಮೈಸೂರಿನಲ್ಲಿ ನಿರ್ಮಿಸುತ್ತಿರುವ ನಿಮ್ಮ ಹೊಸ ಮನೆಗೆ ಮನಮೋಹನ್ ಸಿಂಗ್ ನಿವಾಸ ಎಂದು ಹೆಸರಿಟ್ಟುಕೊಳ್ಳಿ. ನಿಮ್ಮ ಸೊಸೆಯ ಒಡೆತನದಲ್ಲಿರುವ ಬಹುಕೋಟಿ ಮೌಲ್ಯದ ಐಶಾರಾಮಿ ಕ್ಲಬ್ಗೆ ಮರು ನಾಮಕರಣ ಮಾಡಿಕೊಳ್ಳಿ.
ದೆಹಲಿಯ ಹೊಸದಾಗಿ ನಿರ್ಮಿಸಿದ ಕಾಂಗ್ರೆಸ್ ಕಚೇರಿಗೆ “ಇಂದಿರಾ ಭವನ” ಎಂದು ಹೆಸರಿಟ್ಟಿರಿ. ಅದಕ್ಕೆ ಮನಮೋಹನ್ ಸಿಂಗ್ ಹೆಸರಿಡಲು ಇಟಲಿ ಕಾಂಗ್ರೆಸ್ನ ಆಪ್ತರ ಗುಂಪು ಒಪ್ಪಲಿಲ್ಲ ಎಂಬುದು ತಮಗೆ ತಿಳಿದಿರುವ ವಿಷಯ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತವಿರುವ ಕಾರಣ “ಗುಲಾಮಿ ಕಾಂಗ್ರೆಸ್” ನಾಯಕರು, ಬೆಂಗಳೂರಿನಲ್ಲಿ ಬೇಳೆ ಬೇಯಿಸಿಕೊಳ್ಳುತ್ತೀರಿ.
ಕೆಲ ತಿಂಗಳ ಹಿಂದಷ್ಟೆ ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಕಂಚಿನ ಪ್ರತಿಮೆ ಅನಾವರಣಗೊಳಿಸಲಾಗಿತ್ತು. ಈಗ ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು ನಾಮಕರಣ ಮಾಡುವುದಾಗಿ ಘೋಷಿಸಿದ್ದೀರಿ ಎಂದು ಕಿಡಿಕಾರಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…