ರಾಜ್ಯ

ಬೆಂಗಳೂರು ವಿವಿಗೆ ಮನಮೋಹನ್‌ ಸಿಂಗ್‌ ಹೆಸರಿಡಲು ಜೆಡಿಎಸ್‌ ವಿರೋಧ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಹೆಸರಿಡಲು ಜೆಡಿಎಸ್‌ ವಿರೋಧ ವ್ಯಕ್ತಪಡಿಸಿದ್ದು, ಬೆಂಗಳೂರು ವಿವಿ ನಿಮ್ಮ ಮನೆತನ ಆಸ್ತಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಜೆಡಿಎಸ್‌ ಪಕ್ಷವು, ಬೆಂಗಳೂರು ಎಂಬುದು ಈ ನೆಲಮೂಲದ ಹೆಗ್ಗುರುತು. ಸಮಸ್ತ ಕನ್ನಡಿಗರ ಹೆಮ್ಮೆ ಹಾಗೂ ಕನ್ನಡಿಗರ ಪ್ರತಿಧ್ವನಿ. ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದ ನಗರ. ಬೆಂಗಳೂರು ಎಂಬುದೇ ಒಂದು ವಿಶ್ವ ಪ್ರಸಿದ್ಧ ಬ್ರ್ಯಾಂಡ್. ಅದೇ ಬೆಂಗಳೂರು ಹೆಸರಿಗೆ ಇರುವ ಶಕ್ತಿ.

ನಮಗೆ ಡಾ.ಮನಮೋಹನ್ ಸಿಂಗ್ ಅವರ ಮೇಲೆ ಅಪಾರವಾದ ಗೌರವವಿದೆ. ಆದರೆ “ಬೆಂಗಳೂರು ನಗರ ವಿವಿ”ಗೆ ಪರ್ಯಾಯವಾಗಿ ಬೇರೆ ಯಾವುದೇ ಹೆಸರಿಡಲು ತೀವ್ರ ವಿರೋಧವಿದೆ. ಈ ವಿಚಾರದಲ್ಲಿ ಕರ್ನಾಟಕದ ಜನತೆಯೂ ಸಹ ಕಾಂಗ್ರೆಸ್ ಸರ್ಕಾರದ ಈ ನಿರ್ಧಾರವನ್ನು ಒಪ್ಪುವುದಿಲ್ಲ.

ರಾಜ್ಯದಲ್ಲಿ ಕನ್ನಡ ಭಾಷೆ, ನೆಲ, ಜಲ ನಾಡಿಗಾಗಿ ಹೋರಾಡಿದ ಸಾವಿರಾರು ಕನ್ನಡಿಗ ಸಾಧಕರು ಇದ್ದಾರೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಕರ್ನಾಟಕಕ್ಕೆ ಕೀರ್ತಿ ತಂದ ಮಹನೀಯರಿದ್ದಾರೆ. ಆ ಕನ್ನಡಿಗರು ಕಾಂಗ್ರೆಸ್ಸಿಗರ ಕಣ್ಣಿಗೆ ಬೀಳಲಿಲ್ಲವೇ? ಎಂದು ಪ್ರಶ್ನೆ ಮಾಡಿದೆ.

ಸಿದ್ದರಾಮಯ್ಯನವರೇ ಅಷ್ಟು ಅಭಿಮಾನ, ಗೌರವ ಇದ್ದರೆ ಮೈಸೂರಿನಲ್ಲಿ ನಿರ್ಮಿಸುತ್ತಿರುವ ನಿಮ್ಮ ಹೊಸ ಮನೆಗೆ ಮನಮೋಹನ್ ಸಿಂಗ್ ನಿವಾಸ ಎಂದು ಹೆಸರಿಟ್ಟುಕೊಳ್ಳಿ. ನಿಮ್ಮ ಸೊಸೆಯ ಒಡೆತನದಲ್ಲಿರುವ ಬಹುಕೋಟಿ ಮೌಲ್ಯದ ಐಶಾರಾಮಿ ಕ್ಲಬ್‌ಗೆ ಮರು ನಾಮಕರಣ ಮಾಡಿಕೊಳ್ಳಿ.

ದೆಹಲಿಯ ಹೊಸದಾಗಿ ನಿರ್ಮಿಸಿದ ಕಾಂಗ್ರೆಸ್‌ ಕಚೇರಿಗೆ “ಇಂದಿರಾ ಭವನ”‌ ಎಂದು ಹೆಸರಿಟ್ಟಿರಿ. ಅದಕ್ಕೆ ಮನಮೋಹನ್‌ ಸಿಂಗ್‌ ಹೆಸರಿಡಲು ಇಟಲಿ ಕಾಂಗ್ರೆಸ್‌ನ ಆಪ್ತರ ಗುಂಪು ಒಪ್ಪಲಿಲ್ಲ ಎಂಬುದು ತಮಗೆ ತಿಳಿದಿರುವ ವಿಷಯ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತವಿರುವ ಕಾರಣ “ಗುಲಾಮಿ ಕಾಂಗ್ರೆಸ್‌” ನಾಯಕರು, ಬೆಂಗಳೂರಿನಲ್ಲಿ ಬೇಳೆ ಬೇಯಿಸಿಕೊಳ್ಳುತ್ತೀರಿ.

ಕೆಲ ತಿಂಗಳ ಹಿಂದಷ್ಟೆ ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಕಂಚಿನ ಪ್ರತಿಮೆ ಅನಾವರಣಗೊಳಿಸಲಾಗಿತ್ತು. ಈಗ ಬೆಂಗಳೂರು ವಿವಿಗೆ ಮನಮೋಹನ್‌ ಸಿಂಗ್‌ ಹೆಸರು ನಾಮಕರಣ ಮಾಡುವುದಾಗಿ ಘೋಷಿಸಿದ್ದೀರಿ ಎಂದು ಕಿಡಿಕಾರಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

2 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

2 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

2 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

2 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

2 hours ago