ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ಬಳಿ ಯೋಜನೆಗೆ ಒಪ್ಪಿಸುವ ಕೆಲಸ ಮಾಡಲಿ, ಕನ್ನಡಿಗರ ಹಿತವನ್ನು ಕಾಪಾಡಲಿ ಎಂದು ಜೆಡಿಎಸ್ ಒತ್ತಾಯಿಸಿದೆ.
ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡಪರ ಹೋರಾಟಗಾರರೂ ಸಹ ಇಂದು ಕರ್ನಾಟಕ ಬಂದ್ ಮಾಡಿದ್ದಾರೆ. ಆದರೆ, ಶಿವಕುಮಾರ್ ಇಂದು ಚೆನ್ನೈ ಪ್ರವಾಸ ಕೈಗೊಂಡಿದ್ದಾರೆ ಎಂದು ಟೀಕಿಸಿದೆ.
ನಮ್ಮ ನೀರು, ನಮ ಹಕ್ಕು ಎಂದು ಢೋಂಗಿ ಪಾದಯಾತ್ರೆ ಮಾಡಿ, ಅಧಿಕಾರಕ್ಕೆ ಬಂದರೇ ಮೇಕೆದಾಟು ಯೋಜನೆ ಜಾರಿಮಾಡುತ್ತೇವೆ ಎಂದು, ಜನರಿಗೆ ಚೊಂಬು ಕೊಟ್ಟಿರುವ ಕಾಂಗ್ರೆಸ್ ಎಂದು ಜೆಡಿಎಸ್ ಆರೋಪಿಸಿದೆ.
ರಾಜಕೀಯ ಬದಿಗಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಿ. ಇಂಡಿ ಕೂಟದ ಮಿತ್ರ ಪಕ್ಷವಾದ ಡಿಎಂಕೆ ಜೊತೆ ಹೊಂದಾಣಿಕೆ ರಾಜಕೀಯ ಬಿಟ್ಟು, ಕರ್ನಾಟಕದ ಹಿತರಕ್ಷಣೆ ಮಾಡಲಿ ಎಂದು ಆಗ್ರಹಿಸಿದೆ.
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…