ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ಬಳಿ ಯೋಜನೆಗೆ ಒಪ್ಪಿಸುವ ಕೆಲಸ ಮಾಡಲಿ, ಕನ್ನಡಿಗರ ಹಿತವನ್ನು ಕಾಪಾಡಲಿ ಎಂದು ಜೆಡಿಎಸ್ ಒತ್ತಾಯಿಸಿದೆ.
ಈ ಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡಪರ ಹೋರಾಟಗಾರರೂ ಸಹ ಇಂದು ಕರ್ನಾಟಕ ಬಂದ್ ಮಾಡಿದ್ದಾರೆ. ಆದರೆ, ಶಿವಕುಮಾರ್ ಇಂದು ಚೆನ್ನೈ ಪ್ರವಾಸ ಕೈಗೊಂಡಿದ್ದಾರೆ ಎಂದು ಟೀಕಿಸಿದೆ.
ನಮ್ಮ ನೀರು, ನಮ ಹಕ್ಕು ಎಂದು ಢೋಂಗಿ ಪಾದಯಾತ್ರೆ ಮಾಡಿ, ಅಧಿಕಾರಕ್ಕೆ ಬಂದರೇ ಮೇಕೆದಾಟು ಯೋಜನೆ ಜಾರಿಮಾಡುತ್ತೇವೆ ಎಂದು, ಜನರಿಗೆ ಚೊಂಬು ಕೊಟ್ಟಿರುವ ಕಾಂಗ್ರೆಸ್ ಎಂದು ಜೆಡಿಎಸ್ ಆರೋಪಿಸಿದೆ.
ರಾಜಕೀಯ ಬದಿಗಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಿ. ಇಂಡಿ ಕೂಟದ ಮಿತ್ರ ಪಕ್ಷವಾದ ಡಿಎಂಕೆ ಜೊತೆ ಹೊಂದಾಣಿಕೆ ರಾಜಕೀಯ ಬಿಟ್ಟು, ಕರ್ನಾಟಕದ ಹಿತರಕ್ಷಣೆ ಮಾಡಲಿ ಎಂದು ಆಗ್ರಹಿಸಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…