ರಾಜ್ಯ

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು ತೀರ್ಮಾನಿಸಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ನಡೆಯಲಿರುವ ಚುನಾವಣೆ ಸಿದ್ಧತೆಯ ಹಿನ್ನೆಲೆಯಲ್ಲಿ ಈ ಸಮಾವೇಶ ಹೆಚ್ಚಿನ ಮಹತ್ವ ಪಡೆದುಕೊಳ್ಳಲಿದೆ.

ಏ.11 ರಂದು ನಗರದ ಹೊರವಲಯದ ಕೊಮಗಟ್ಟದ ಬಳಿಯ ಮೈದಾನದಲ್ಲಿ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದೆ. ಈಗಾಗಲೇ ಹಾಸನ ಹಾಗೂ ವಿಜಯಪುರಗಳಲ್ಲಿ ನಡೆಸಿದ ಸಮಾವೇಶ ಯಶಸ್ವಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೂ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ನಿರ್ಧರಿಸಲಾಗಿದೆ.

ಮುಂಬರುವ ಚುನಾವಣೆಗಳಿಗೆ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಸಜ್ಜುಗೊಳಿಸುವುದು, ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ಮಾರ್ಗದರ್ಶನ ಮಾಡುವುದು, ಪಕ್ಷಸಂಘಟನೆಗಾಗಿ ಸದಸ್ಯತ್ವ ನೋಂದಣಿಯನ್ನು ಇನ್ನಷ್ಟು ಹೆಚ್ಚಿಸಲು ಜನಪರ ಹೋರಾಟಗಳನ್ನು ಹಮಿಕೊಳ್ಳುವ ರೂಪುರೇಷೆ ನಿರ್ಧರಿಸುವುದು, 25 ವರ್ಷಗಳಲ್ಲಿ ಪಕ್ಷ ಬೆಳೆದುಬಂದ ಹೆಜ್ಜೆಗುರುತುಗಳನ್ನು ಅವಲೋಕಿಸುವುದು ಮೊದಲಾದ ವಿಚಾರಗಳು ಸಮಾವೇಶದ ಪ್ರಮುಖ ಅಂಶಗಳಾಗಿವೆ.

ಬೆಂಗಳೂರಿನ ಸಮಾವೇಶದ ಪೂರ್ವ ಸಿದ್ಧತೆಯನ್ನು ಈಗಾಗಲೇ ಪಕ್ಷದ ವತಿಯಿಂದ ಆರಂಭಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್‍ಗೌಡ, ಮಾಜಿ ವಿಧಾನಪರಿಷತ್ ಸದಸ್ಯ ಇ.ಕೃಷ್ಣಪ್ಪ ಮೊದಲಾದ ಮುಖಂಡರ ಅಧ್ಯಕ್ಷತೆಯಲ್ಲಿ ಸಮಾವೇಶದ ಪೂರ್ವ ತಯಾರಿ ಕುರಿತ ಸಭೆ ನಡೆಸಲಾಗಿದೆ.

ಈಗಾಗಲೇ ಪಕ್ಷದ ವತಿಯಿಂದ ನಡೆಸಿರುವ ಎರಡು ಸಮಾವೇಶಕ್ಕಿಂತಲೂ ಉತ್ತಮ ರೀತಿಯಲ್ಲಿ ಈ ಬೆಂಗಳೂರಿನ ಸಮಾವೇಶ ಯಶಸ್ವಿಗೊಳಿಸಲು ಬೇಕಾದ ಸಿದ್ಧತೆ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

3 seconds ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 mins ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

6 mins ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

10 mins ago

ಕೆಸರುಗದ್ದೆ ಕ್ರೀಡಾಕೂಟಕೂಟ: ಕಾಡುತ್ತಿರುವ ಮಳೆ ಕೊರತೆ!

ನವೀನ್ ಡಿಸೋಜ ಮುಂಗಾರು ಆರಂಭದಲ್ಲಿ ವಾಡಿಕೆ ಮಳೆಯಾಗದೆ ಆಯೋಜನೆಗೆ ಹಿಂದೇಟು; ಹಲವೆಡೆ ಕ್ರೀಡಾಕೂಟ ಮುಂದೂಡಿಕೆ ಮಡಿಕೇರಿ: ಪ್ರತಿವರ್ಷ ಮಳೆಗಾಲದಲ್ಲಿ ಕೊಡಗು…

15 mins ago

ಟಿಎಪಿಸಿಎಂಎಸ್ ಅಧಿಕಾರ ಹಿಡಿಯಲು ತಂತ್ರ-ಪ್ರತಿತಂತ್ರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಗುರುವಾರ (ಆ.೨೦) ನಡೆಯಲಿದ್ದು, ಅಧಿಕಾರ…

19 mins ago