ರಾಜ್ಯ

ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ : ನಿಖಿಲ್‌

ರಾಮನಗರ : ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ. ಯಾವುದೇ ಕಾರಣಕ್ಕೂ ನಾನು ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದು ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ದೃಢ ಸಂಕಲ್ಪವನ್ನು ವ್ಯಕ್ತಪಡಿಸಿದರು.

ಇದು ನಮ್ಮ ಸ್ವ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನ ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ. ಸೋಲು ಗೆಲುವು ಸರ್ವೇ ಸಾಮಾನ್ಯ ನನ್ನ ಮೂರು ಸೋಲುಗಳು ನನಗೆ ರಾಜಕೀಯವಾಗಿ ಪರಿಪಕ್ವತೆಯನ್ನು ಕಲಿಸಿವೆ. ಈ ಸೋಲುಗಳಿಂದ ಕುಗ್ಗದೆ ಮತ್ತೆ ಅವಕಾಶ ಸಿಕ್ಕರೆ ರಾಮನಗರದಿಂದಲೇ ಸ್ವರ್ಧೆ ಮಾಡುವುದಾಗಿ ತಿಳಿಸಿದರು.

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಆರನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಸಭೆಯನ್ನ ಉದ್ದೇಶಿಸಿ ಅವರು ಮಾತನಾಡಿದರು.

ಕುಮಾರಸ್ವಾಮಿ ಅವರಿಗೆ ದೆಹಲಿಯಲ್ಲಿ ಕೆಲಸವಿಲ್ಲ ರಾಜ್ಯಕ್ಕೆ ಬರ್ತಾರೆಂಬ ಡಿ.ಕೆ.ಸುರೇಶ್ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು; ಹೌದಪ್ಪ.. ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಕೊಡಿಸಿದ್ದು ಡಿ.ಕೆ ಸುರೇಶ್ ಅವರ ಇಲ್ಲ ಶಿವಕುಮಾರ್ ಕೊಡಿಸಿದ್ರಾ.? ಎಂದು ಡಿ.ಕೆ ಬ್ರದರ್ಸ್ ಗೆ ಟಾಂಗ್ ನೀಡಿದರು.

ಮಾವಿನ ಹಣ್ಣಿನ ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಕುಮಾರಣ್ಣ ನೆರವಿಗೆ ಬಂದಿದ್ದಾರೆ..ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದ ಕುಮಾರಣ್ಣನ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಬೆಂಬಲ ಬೆಲೆ ಘೋಷಿಸಿದೆ ಎಂದರು.

ರಾಮನಗರ ಜಿಲ್ಲೆ ಹೆಸರು ಬದಲಾವಣೆ ವಿಚಾರ ;
ಹೆಸರು ಬದಲಾವಣೆ ಮಾಡುವುದರಿಂದ ಅಭಿವೃದ್ಧಿ ಆಗಲ್ಲ. ಕೆಂಗಲ್ ಹನುಮಂತಯ್ಯ ಅವರ ಕಟ್ಟಿದ ರಾಮನಗರ ಹೆಸರನ್ನು ಕಾಂಗ್ರೆಸ್ ಅಳಿಸಿದೆ. ಆದರೆ ರಾಮನಗರ ಜನರ ಹೃದಯದಲ್ಲಿ ರಾಮನಗರ ಶಾಶ್ವತವಾಗಿ ಉಳಿದಿದೆ ಮಿಸ್ಟರ್ ಡಿ.ಕೆ ಶಿವಕುಮಾರ್ ಎಂದು ಟಾಂಗ್ ನೀಡಿದರು.

ಒಂದು ರಸ್ತೆಗೆ, ಸರ್ಕಾರಿ ಶಾಲೆ ದುರಸ್ತಿಗೆ ಹಣವಿಲ್ಲ ಈ ಸರ್ಕಾರದಲ್ಲಿ. ಆದರೆ ಮಧ್ಯವರ್ತಿಗಳ ಮೂಲಕ ಹೋದ್ರೆ ಎಲ್ಲವೂ ಸಿಗುತ್ತೆ. ಆ ಸ್ಥಿತಿ ಇದೇ ಕಾಂಗ್ರೆಸ್ ಪಕ್ಷದಲ್ಲಿ. ವಸತಿ ಇಲಾಖೆಯಲ್ಲಿ ಮನೆ ಪಡೆಯಬೇಕಾದ್ರೆ ಗುತ್ತಿಗೆದಾರರ ಮೂಲಕ ಹೋಗುವ ಪರಿಸ್ಥಿತಿ ನಿರ್ಮಾವಾಗಿದೆ ಎಂದು ಆರೋಪಿಸಿದರು.

ಕಾವೇರಿಗೆ ಆರತಿ ಸರ್ಕಾರ ಹಣ ಖರ್ಚು ಮಾಡ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು; ಕಾವೇರಿಗೆ ಆರತಿ ಮಾಡುತ್ತಿರುವುದು ಸ್ವಾಗತ ಮಾಡುತ್ತೇನೆ, ಅದು ನಮ್ಮ ಸಂಸ್ಕೃತಿ. ಆದರೆ ಅದಕ್ಕೆ ಕೋಟಿ, ಕೋಟಿ ಹಣ ಖರ್ಚು ಮಾಡುವುದರಿಂದ ಜನ ಸಾಮಾನ್ಯರಿಗೆ ಕಷ್ಟ. ಈ ಹಣವನ್ನ ಕಾಂಗ್ರೆಸ್ ಕೊಡುತ್ತಾ.? ಜನರ ಹಣದಿಂದ ಖರ್ಚು ಮಾಡ್ತಾರೆ ಎಂದು ಕಿಡಿಕಾರಿದರು.

ಪಕ್ಷ ನಿಮ್ಮನ್ನು ಗುರುತಿಸಲಿದೆ. ಕಾರ್ಯಕರ್ತರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಈ ರಾಜ್ಯ ಪ್ರವಾಸ ಹಮ್ಮಿಕೊಂಡಿರುವುದೇ ಜನರೊಂದಿಗೆ ಜನತಾದಳ ಎಂಬ ಅಭಿಯಾನದ ಭಾಗವಾಗಿ ಪ್ರತಿಯೊಬ್ಬ ಕಾರ್ಯಕರ್ತರನ್ನು ಭೇಟಿಯಾಗಿ ಪಕ್ಷವನ್ನು ಬಲಿಷ್ಠಗೊಳಿಸುವ ಗುರಿಯನ್ನು ಹೊತ್ತಿ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರಾದ ಎ. ಮಂಜುನಾಥ್ ಅವರು, ತಾಲ್ಲೂಕು ಅಧ್ಯಕ್ಷರಾದ ಸಬ್ಬಕೆರೆ ಶಿವಲಿಂಗಪ್ಪ ಅವರು, ನಗರಸಭಾ ಸದಸ್ಯರಾದ ಶ್ರೀ ಮಂಜುನಾಥ್ ಅವರು, ಮಾಜಿ ನಗರಸಭೆ ಸದಸ್ಯರಾದ ರವಿ, ಮುಖಂಡರುಗಳಾದ ಪ್ರಕಾಶ್, ಎಸ್ ಸಿ ರಾಜಣ್ಣ, ಶ್ರೀಮತಿ ಲಕ್ಷ್ಮೀ ಗೂಳಿಗೌಡ, ಹಾರೋಹಳ್ಳಿ ರಾಮಣ್ಣ, ಕೆಂಪಣ್ಣ, ವಾಸು, ದೊರೆ, ಉಮೇಶ್ , ಅಪ್ಪಿ, ಶಿವಕುಮಾರ್, ಕೃಷ್ಣಮೂರ್ತಿ, ಬಿಡದಿ ಶೇಷಪ್ಪ, ಶ್ರೀಮತಿ ಮಂಜುಳಾ ವೆಂಕಟೇಶ ಹಾಗೂ ಅಣ್ಣತಮ್ಮಂದಿರು, ತಾಯಂದಿರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

11 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

11 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

12 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

13 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

13 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

13 hours ago