ರಾಜ್ಯ

ಎಡಿಜಿಪಿ ಚಂದ್ರಶೇಖರ್‌ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಜೆಡಿಎಸ್

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಅಧಿಕಾರಿ ಎಂ.ಚಂದ್ರಶೇಖರ್‌ ಅವರು ತಮ್ಮ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪತ್ರದ ಮುಖಾಂತರ ಸಮರ ಸಾರಿದ್ದಾರೆ.

ಜನಪ್ರಿಯ ಬರ್ನಾರ್ಡ್‌ ಷಾ ಅವರ ಹೇಳಿಕೆಗಳಲ್ಲಿ ಒಂದಾಗಿರುವ ಹಂದಿಗೆ ಹೋಲಿಕೆಯಾಗುವ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಆದರೆ ಇದೀಗ ಈ ಹೇಳಿಕೆಯನ್ನು ಖಂಡಿಸಿ ಎಡಿಜಿಪಿ ಚಂದ್ರಶೇಖರ್‌ ವಿರುದ್ಧ ಜೆಡಿಎಸ್‌ ಮತ್ತು ಬಿಜೆಪಿ ನಾಯಕರು ಸೇರಿದಂತೆ ಸ್ವತಃ ಕುಮಾರಸ್ವಾಮಿ ಅವರೇ ತಿರುಗೇಟು ನೀಡಿದ್ದಾರೆ.

ಎಂ.ಚಂದ್ರಶೇಖರ್ ಭೂವ್ಯವಹಾರವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ. 20 ಕೋಟಿಗೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ ನೀವೇ ಅಲ್ಲವೇ? ಈ ವಿಚಾರವಾಗಿ ನಿಮ್ಮ ವಿರುದ್ಧ ಇನ್ಸ್​ಪೆಕ್ಟರ್ ಒಬ್ಬರು ದೂರು ನೀಡಿದ್ದಾರೆ. ಅಲ್ಲದೇ ಕೇಂದ್ರ ಸಚಿವರ ಬಗ್ಗೆ ಕೀಳುಮಟ್ಟದ ಪದ ಬಳಸಿರುವುದು ಅಕ್ಷಮ್ಯ. ನೀವೊಬ್ಬ ಐಪಿಎಸ್ ಅಧಿಕಾರಿಯಾಗಿರಲು ಅನರ್ಹ. ಬಹುಮಹಡಿ ವಾಣಿಜ್ಯ ಕಟ್ಟಡ ಎಷ್ಟು ಕೋಟಿ ಲಂಚ ಪಡೆದು ಕಟ್ಟುತ್ತಿದ್ದೀರಿ. ಬೆಂಗಳೂರಿನಲ್ಲಿ ನಿಮ್ಮ ಪತ್ನಿ ಹೆಸರಲ್ಲಿ ನಿರ್ಮಿಸುತ್ತಿರುವ ಬಹುಮಹಡಿ ಕಟ್ಟಡ. ರಾಜಕಾಲುವೆ ಮೇಲೆ ನಿರ್ಮಿಸುತ್ತಿರುವ ಬಹು ಮಹಡಿಯ ವಾಣಿಜ್ಯ ಕಟ್ಟಡ. ಕೆರೆ ಒತ್ತುವರಿ ಮಾಡಿಕೊಂಡ ಅಕ್ರಮಗಳ ಬಗ್ಗೆ ತನಿಖೆ ನಡೆಯಬೇಕಲ್ಲವೇ? ಎಂದು ಜೆಡಿಎಸ್‌  ಗಂಭೀರ ಆರೋಪ ಮಾಡಿದೆ.

ಎಡಿಜಿಪಿ ಚಂದ್ರಶೇಖರ್‌ ಪತ್ರದ ಮೂಲಕ ಸಮರಸಾರಿರುವ ವಿಚಾರವಾಗಿ ಟ್ವೀಟ್‌ ಮಾಡಿರುವ ಜೆಡಿಎಸ್‌, ಚಂದ್ರಶೇಖರ್‌ ಅವರೇ, ನಿಮ್ಮ ಮೇಲಿರುವ ಆರೋಪಗಳು ಸತ್ಯವಲ್ಲವೆಂದರೆ ನೀವು ಕಾನೂನಿ ಅಡಿಯಲ್ಲಿ ಉತ್ತರ ನೀಡಬಹುದಿತ್ತು. ಆದರೆ ನೀವು ಕಳ್ಳನ ಮನಸ್ಸು ಹುಳ್ಳಳ್ಳಗೆ ಅನ್ನೋ ರೀತಿಯಲ್ಲಿ ಪತ್ರದ ಮೂಲಕ ಉತ್ತರಿಸಿದ್ದೀರಾ?, ನೀವೋಬ್ಬ ಐಪಿಎಸ್‌ ಅಧಿಕಾರಿ ಎನ್ನುವುದನ್ನು ಮರೆತು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕೋಪ, ಹತಾಶೆ ಮತ್ತು ಅಕ್ರೋಶದಿಂದ ಕೀಳುಮಟ್ಟದ ಪದಗಳನ್ನು ಬಳಸಿ ಉತ್ತರ ನೀಡಿದ್ದೀರಿ. ನಿಮ್ಮ ಭ್ರಷ್ಟಾಚಾರವನ್ನು ದಾಖಲೆ ಸಹಿತ ಬಯಲು ಮಾಡಿದ್ದು ಅಪರಾಧವೇ ಎಂದು ಪ್ರಶ್ನೆ ಮಾಡಿದೆ.

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ಒಬ್ಬರೂ ಭ್ರಷ್ಟ ಅಧಿಕಾರಿ ಈತನ ವಿರುದ್ಧವೂ ಅನೇಕ ದೂರುಗಳು ದಾಖಲಾಗಿದ್ದು, ಆರೋಪ ಪಟ್ಟಿ ಸಹ ಸಲ್ಲಿಕೆಯಾಗಿದೆ. ಅನೇಕ ಅಪರಾಧ ಮಾಡಿರುವ ಕಳಂಕಿತ ಅಧಿಕಾರಿಗಳಿಂದ ನ್ಯಾಯ ಸಮ್ಮತ, ಮುಕ್ತ ಮತ್ತು ಪಾರದರ್ಶಕ ತನಿಖೆ ಅಸಾಧ್ಯ. ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಕೇಂದ್ರ ಸಚಿವರ ವಿರುದ್ಧ ಕೀಳುಮಟ್ಟದ ಪದ ಬಳಸಿರುವ ಹಾಗೂ ಭ್ರಷ್ಟಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ನಂತರ ಚಂದ್ರಶೇಖರ್‌ ಅವರ ಅಕ್ರಮಗಳ ಬಗ್ಗೆಯೂ ಸರ್ಕಾರ ತನಿಖೆ ನಡೆಸಬೇಕು ಎಂದು ಜೆಡಿಎಸ್‌ ಘಟಕ ಎಕ್ಸ್‌ ಖಾತೆಯಲ್ಲಿ ಒತ್ತಾಯಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

18 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

37 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

60 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago