ರಾಜ್ಯ

ಪ್ರಜ್ವಲ್‌ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣದಲ್ಲಿ ಜೆಡಿಎಸ್‌ ಶಾಸಕನ ಕೈವಾಡವಿದೆ ಎಂದ ನವೀನ್‌ ಗೌಡ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಇದೀಗ ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಜೆಡಿಎಸ್‌ ಶಾಸಕರ ಹೆಸರು ತುಳುಕು ಹಕುತ್ತಿದೆ.

ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಅರಕಲಗೂಡು ಜೆಡಿಎಸ್ ಶಾಸಕ ಎ.ಮಂಜು‌ ಅವರ ಹೆಸರು ಕೇಳಿ ಬರುತ್ತಿದೆ. ಈ ಬಗ್ಗೆ ನವೀನ್‌ ಗೌಡ ಎಂಬಾತ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದು, ಜೆಡಿಎಸ್‌ ಶಾಸಕ. ಎ.ಮಂಜು ಅವರೇ ಪೆನ್‌ಡ್ರೈವ್‌ ಹಂಚಿಕೆ ಮಾಡಿರಬಹುದು ಎಂದು ಅನುಮಾನಿಸಿದ್ದಾರೆ.

ವಿಡಿಯೋ ವೈರಲ್‌ ಮಾಡಿದ್ದವರ ಹಿಂದೆ ಮಹನಾಯಕನ ಕೈವಾಡ ಇದೆ ಎಂದು ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದ್ದರು. ಆ ಮಹಾನಾಯಕ ಮಹಾ ನಾಯಕ ಇವರೇ ಇರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪೋಸ್ಟ್‌ನಲ್ಲೇನಿದೆ?
ಏಪ್ರಿಲ್‌ ೨೦ ರಂದು ನನಗೆ ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್‌ ಅನ್ನು ಅರಕಲಗೂಡು ಶಾಸಕರಾದ ಎ.ಮಂಜು ಅವರಿಗೆ ಏಪ್ರಿಲ್‌ ೨೧ ರಂದು ಅರಕಲಗೂಡಿಲ ಮಾರುತಿ ಕಲ್ಯಾಣ ಮಂಟಪದಲ್ಲಿ ನೀಡಿದ್ದೇನೆ, ಕುಮಾರಸ್ವಾಮಿ ಅವರು ಹೇಳಿದ ಹಾಗೆ ವಿಡಿಯೋ ವೈರಲ್‌ ಹಿಂದೆ ಇರುವ ಮಹಾನಾಯಕ ಅರಕಲಗೂಡು ಶಾಸಕರೇ ಆಗಿರಬಹುದು ಎಂದು ಪೋಸ್ಟ್‌ ಮಾಡಿದ್ದಾರೆ. ಸದ್ಯ ನವೀನ್‌ ಗೌಡ ಪೋಸ್ಟ್‌ ಎಲ್ಲೆಡೆ ವೈರಲ್‌ ಆಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

9 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

9 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

9 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

9 hours ago