ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಲೂಟಿಕೋರರು ದರೋಡೆಕೋರರಿಗೆ ಸ್ವರ್ಗವಾಗಿದೆ ಎಂದು ಜೆಡಿಎಸ್ ಶಾಸಕ ಶರವಣ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಲೂಟಿಕೋರರು, ದರೋಡೆ ಮಾಡೋರಿಗೆ ಸ್ವರ್ಗವಾಗಿದೆ. ಗೃಹ ಇಲಾಖೆ ಸತ್ತು ಹೋಗಿದೆ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ. 4-5 ದಿನಗಳಿಂದ ಬೀದರ್, ಮಂಗಳೂರು, ಮೈಸೂರು ಭಾಗದಲ್ಲಿ ದರೋಡೆ, ಲೂಟಿ ಕೇಸ್ಗಳು ಆಗಿವೆ. ಕರ್ನಾಟಕದಲ್ಲಿ ಜನರು ಸುರಕ್ಷಿತರಾಗಿಲ್ಲ. ಎಲ್ಲರೂ ಭಯಭೀತರಾಗಿದ್ದಾರೆ. ಗೃಹ ಸಚಿವರು ಮನೆ ಬಿಟ್ಟು ಹೊರಗೆ ಬಂದು ಪೊಲೀಸ್ ವ್ಯವಸ್ಥೆ ಬಿಗಿ ಮಾಡುತ್ತಿಲ್ಲ ಎಂದು ಗೃಹ ಸಚಿವರ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ಕಾಂಗ್ರೆಸ್ ನಾಯಕರು ಬೆಳಗಾವಿಯಲ್ಲಿ ಗಾಂಧಿ ಸಮಾವೇಶ ಮಾಡಿ ಜಪ, ಶಾಂತಿ ಎಂದು ಮಾತನಾಡುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಪವರ್ ಫೈಟ್ ಜೋರಾಗಿದೆ. ಇದರಲ್ಲಿ ಈ ಸರ್ಕಾರ ಮುಳುಗಿ ಕಾನೂನು ಸುವ್ಯವಸ್ಥೆ ಕಾಪಾಡುತ್ತಿಲ್ಲ. ಇವತ್ತು ಕ್ರೈಂ ಜಾಸ್ತಿ ಆಗೋಕೆ ಈ ಸರ್ಕಾರನೇ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…