ರಾಜ್ಯ

ನಾಳೆ ವಿಜಯಪುರದಲ್ಲಿ ಜೆಡಿಎಸ್‌ ಶಕ್ತಿ ಪ್ರದರ್ಶನ

ಬೆಂಗಳೂರು: ಹಾಸನದ ಮಾದರಿಯಲ್ಲೇ ವಿಜಯಪುರ ನಗರದಲ್ಲಿ ನಾಳೆ ಜೆಡಿಎಸ್ ರಜತ ಮಹೋತ್ಸವ ಆಚರಿಸುವ ಮೂಲಕ ಮತ್ತೊಂದು ಶಕ್ತಿ ಪ್ರದರ್ಶನವನ್ನು ನಡೆಸಲಿದೆ.

ವಿಜಯಪುರ ನಗರದಲ್ಲಿ ಜನತಾ ಸಮಾವೇಶ, ಕಿತ್ತೂರು ಕರ್ನಾಟಕ ಹಾಗೂ ಜೆಡಿಎಸ್ ಬೆಳ್ಳಿಹಬ್ಬದ ಸಂಭ್ರಮದ ಹೆಸರಿನಲ್ಲಿ ಸಮಾವೇಶವನ್ನು ಆಯೋಜಿಸಲಾಗುತ್ತಿದೆ.

ಕಿತ್ತೂರು ಕರ್ನಾಟಕ ಭಾಗದ 7 ಜಿಲ್ಲೆಗಳ ಪಕ್ಷದ ಮುಖಂಡರು, ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು, ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು ಸೇರಿದಂತೆ ರಾಜ್ಯಮಟ್ಟದ ಪದಾಧಿಕಾರಿಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಹಾಸನದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಲಾಯಿತು. ಹಾಸನದಲ್ಲಿ ನಡೆಸಿದ ಬೆಳ್ಳಿಹಬ್ಬದ ಆಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ವಿಜಯಪುರದಲ್ಲೂ ರಜತಮಹೋತ್ಸವವನ್ನು ನಾಳೆ ನಡೆಸಲಾಗುತ್ತದೆ.

ಇದಕ್ಕೆ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು, ಪಕ್ಷದ ಎಲ್ಲಾ ಮುಖಂಡರಿಗೂ ಸಮಾವೇಶಕ್ಕೆ ಆಗಮಿಸುವಂತೆ ಆಹ್ವಾನ ನೀಡಲಾಗಿದೆ. ಈ ಭಾಗದಲ್ಲಿ ಜೆಡಿಎಸ್ ನೆಲೆ ಭದ್ರವಾಗಿದೆ ಎಂಬುದನ್ನು ರಾಜಕೀಯ ಎದುರಾಳಿಗಳಿಗೆ ತೋರಿಸುವುದು ಸಮಾವೇಶದ ಪ್ರಮುಖ ಉದ್ದೇಶ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಆಡಳಿತಾವಧಿಯಲ್ಲಿ ನಾಡಿಗೆ ಮಾಡಿರುವ ಸಾಧನೆಗಳು ಹಾಗೂ ಈ ಭಾಗಕ್ಕೆ ನೀಡಿದ ಕೊಡುಗೆಗಳನ್ನೊಳಗೊಂಡ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

12 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

12 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

12 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago