ಬೆಂಗಳೂರು: ಹಾಸನದ ಮಾದರಿಯಲ್ಲೇ ವಿಜಯಪುರ ನಗರದಲ್ಲಿ ನಾಳೆ ಜೆಡಿಎಸ್ ರಜತ ಮಹೋತ್ಸವ ಆಚರಿಸುವ ಮೂಲಕ ಮತ್ತೊಂದು ಶಕ್ತಿ ಪ್ರದರ್ಶನವನ್ನು ನಡೆಸಲಿದೆ.
ವಿಜಯಪುರ ನಗರದಲ್ಲಿ ಜನತಾ ಸಮಾವೇಶ, ಕಿತ್ತೂರು ಕರ್ನಾಟಕ ಹಾಗೂ ಜೆಡಿಎಸ್ ಬೆಳ್ಳಿಹಬ್ಬದ ಸಂಭ್ರಮದ ಹೆಸರಿನಲ್ಲಿ ಸಮಾವೇಶವನ್ನು ಆಯೋಜಿಸಲಾಗುತ್ತಿದೆ.
ಕಿತ್ತೂರು ಕರ್ನಾಟಕ ಭಾಗದ 7 ಜಿಲ್ಲೆಗಳ ಪಕ್ಷದ ಮುಖಂಡರು, ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು, ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು ಸೇರಿದಂತೆ ರಾಜ್ಯಮಟ್ಟದ ಪದಾಧಿಕಾರಿಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಹಾಸನದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಲಾಯಿತು. ಹಾಸನದಲ್ಲಿ ನಡೆಸಿದ ಬೆಳ್ಳಿಹಬ್ಬದ ಆಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ವಿಜಯಪುರದಲ್ಲೂ ರಜತಮಹೋತ್ಸವವನ್ನು ನಾಳೆ ನಡೆಸಲಾಗುತ್ತದೆ.
ಇದಕ್ಕೆ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು, ಪಕ್ಷದ ಎಲ್ಲಾ ಮುಖಂಡರಿಗೂ ಸಮಾವೇಶಕ್ಕೆ ಆಗಮಿಸುವಂತೆ ಆಹ್ವಾನ ನೀಡಲಾಗಿದೆ. ಈ ಭಾಗದಲ್ಲಿ ಜೆಡಿಎಸ್ ನೆಲೆ ಭದ್ರವಾಗಿದೆ ಎಂಬುದನ್ನು ರಾಜಕೀಯ ಎದುರಾಳಿಗಳಿಗೆ ತೋರಿಸುವುದು ಸಮಾವೇಶದ ಪ್ರಮುಖ ಉದ್ದೇಶ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಆಡಳಿತಾವಧಿಯಲ್ಲಿ ನಾಡಿಗೆ ಮಾಡಿರುವ ಸಾಧನೆಗಳು ಹಾಗೂ ಈ ಭಾಗಕ್ಕೆ ನೀಡಿದ ಕೊಡುಗೆಗಳನ್ನೊಳಗೊಂಡ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…