ರಾಜ್ಯ

ನಾಳೆ ವಿಜಯಪುರದಲ್ಲಿ ಜೆಡಿಎಸ್‌ ಶಕ್ತಿ ಪ್ರದರ್ಶನ

ಬೆಂಗಳೂರು: ಹಾಸನದ ಮಾದರಿಯಲ್ಲೇ ವಿಜಯಪುರ ನಗರದಲ್ಲಿ ನಾಳೆ ಜೆಡಿಎಸ್ ರಜತ ಮಹೋತ್ಸವ ಆಚರಿಸುವ ಮೂಲಕ ಮತ್ತೊಂದು ಶಕ್ತಿ ಪ್ರದರ್ಶನವನ್ನು ನಡೆಸಲಿದೆ.

ವಿಜಯಪುರ ನಗರದಲ್ಲಿ ಜನತಾ ಸಮಾವೇಶ, ಕಿತ್ತೂರು ಕರ್ನಾಟಕ ಹಾಗೂ ಜೆಡಿಎಸ್ ಬೆಳ್ಳಿಹಬ್ಬದ ಸಂಭ್ರಮದ ಹೆಸರಿನಲ್ಲಿ ಸಮಾವೇಶವನ್ನು ಆಯೋಜಿಸಲಾಗುತ್ತಿದೆ.

ಕಿತ್ತೂರು ಕರ್ನಾಟಕ ಭಾಗದ 7 ಜಿಲ್ಲೆಗಳ ಪಕ್ಷದ ಮುಖಂಡರು, ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು, ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು ಸೇರಿದಂತೆ ರಾಜ್ಯಮಟ್ಟದ ಪದಾಧಿಕಾರಿಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಹಾಸನದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಲಾಯಿತು. ಹಾಸನದಲ್ಲಿ ನಡೆಸಿದ ಬೆಳ್ಳಿಹಬ್ಬದ ಆಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ವಿಜಯಪುರದಲ್ಲೂ ರಜತಮಹೋತ್ಸವವನ್ನು ನಾಳೆ ನಡೆಸಲಾಗುತ್ತದೆ.

ಇದಕ್ಕೆ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು, ಪಕ್ಷದ ಎಲ್ಲಾ ಮುಖಂಡರಿಗೂ ಸಮಾವೇಶಕ್ಕೆ ಆಗಮಿಸುವಂತೆ ಆಹ್ವಾನ ನೀಡಲಾಗಿದೆ. ಈ ಭಾಗದಲ್ಲಿ ಜೆಡಿಎಸ್ ನೆಲೆ ಭದ್ರವಾಗಿದೆ ಎಂಬುದನ್ನು ರಾಜಕೀಯ ಎದುರಾಳಿಗಳಿಗೆ ತೋರಿಸುವುದು ಸಮಾವೇಶದ ಪ್ರಮುಖ ಉದ್ದೇಶ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಆಡಳಿತಾವಧಿಯಲ್ಲಿ ನಾಡಿಗೆ ಮಾಡಿರುವ ಸಾಧನೆಗಳು ಹಾಗೂ ಈ ಭಾಗಕ್ಕೆ ನೀಡಿದ ಕೊಡುಗೆಗಳನ್ನೊಳಗೊಂಡ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

59 seconds ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

5 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

10 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

16 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago