ರಾಜ್ಯ

ನಾಳೆ ವಿಜಯಪುರದಲ್ಲಿ ಜೆಡಿಎಸ್‌ ಶಕ್ತಿ ಪ್ರದರ್ಶನ

ಬೆಂಗಳೂರು: ಹಾಸನದ ಮಾದರಿಯಲ್ಲೇ ವಿಜಯಪುರ ನಗರದಲ್ಲಿ ನಾಳೆ ಜೆಡಿಎಸ್ ರಜತ ಮಹೋತ್ಸವ ಆಚರಿಸುವ ಮೂಲಕ ಮತ್ತೊಂದು ಶಕ್ತಿ ಪ್ರದರ್ಶನವನ್ನು ನಡೆಸಲಿದೆ.

ವಿಜಯಪುರ ನಗರದಲ್ಲಿ ಜನತಾ ಸಮಾವೇಶ, ಕಿತ್ತೂರು ಕರ್ನಾಟಕ ಹಾಗೂ ಜೆಡಿಎಸ್ ಬೆಳ್ಳಿಹಬ್ಬದ ಸಂಭ್ರಮದ ಹೆಸರಿನಲ್ಲಿ ಸಮಾವೇಶವನ್ನು ಆಯೋಜಿಸಲಾಗುತ್ತಿದೆ.

ಕಿತ್ತೂರು ಕರ್ನಾಟಕ ಭಾಗದ 7 ಜಿಲ್ಲೆಗಳ ಪಕ್ಷದ ಮುಖಂಡರು, ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು, ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು ಸೇರಿದಂತೆ ರಾಜ್ಯಮಟ್ಟದ ಪದಾಧಿಕಾರಿಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಹಾಸನದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಲಾಯಿತು. ಹಾಸನದಲ್ಲಿ ನಡೆಸಿದ ಬೆಳ್ಳಿಹಬ್ಬದ ಆಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ವಿಜಯಪುರದಲ್ಲೂ ರಜತಮಹೋತ್ಸವವನ್ನು ನಾಳೆ ನಡೆಸಲಾಗುತ್ತದೆ.

ಇದಕ್ಕೆ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು, ಪಕ್ಷದ ಎಲ್ಲಾ ಮುಖಂಡರಿಗೂ ಸಮಾವೇಶಕ್ಕೆ ಆಗಮಿಸುವಂತೆ ಆಹ್ವಾನ ನೀಡಲಾಗಿದೆ. ಈ ಭಾಗದಲ್ಲಿ ಜೆಡಿಎಸ್ ನೆಲೆ ಭದ್ರವಾಗಿದೆ ಎಂಬುದನ್ನು ರಾಜಕೀಯ ಎದುರಾಳಿಗಳಿಗೆ ತೋರಿಸುವುದು ಸಮಾವೇಶದ ಪ್ರಮುಖ ಉದ್ದೇಶ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಆಡಳಿತಾವಧಿಯಲ್ಲಿ ನಾಡಿಗೆ ಮಾಡಿರುವ ಸಾಧನೆಗಳು ಹಾಗೂ ಈ ಭಾಗಕ್ಕೆ ನೀಡಿದ ಕೊಡುಗೆಗಳನ್ನೊಳಗೊಂಡ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

4 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

4 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

4 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

5 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

5 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

6 hours ago