ಬೆಂಗಳೂರು: ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿದೇಶದಲ್ಲಿ ಪ್ರಜ್ವಲ್ ತಲೆ ಮರೆಸಿಕೊಂಡಿರುವ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಹಲವಾರು ಕಾನೂನಾತ್ಮಕ ಕ್ರಮಗಳನ್ನು ಕೈಗೊಂಡಿದೆ.
ಸಿಎಂ ಸಿದ್ದರಾಮಯ್ಯ ಅವರು ಕೂಡಾ ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಎರಡು ಬಾರಿ ಪತ್ರವನ್ನು ಬರೆದಿದ್ದಾರೆ. ಇತ್ತ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ವಾಪಸಾತಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕೂಡಾ ಮನವಿ ಮಾಡಿದ್ದರು.
ಇದರ ಬೆನ್ನಲ್ಲೇ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಪ್ರಜ್ವಲ್ ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬಹಿರಂಗ ಪತ್ರವನ್ನು ಹಂಚಿಕೊಂಡಿರುವ ದೇವೇಗೌಡರು. ನಿನ್ನಿಂದ ಕುಟುಂಬ ಮಾನ ಹಾಳಾಗುತ್ತಿದೆ. ನೀನು ಎಲ್ಲೇ ಇದ್ದರೂ ಹಿಂತಿರುಗಿ ಬಂದು ಕಾನೂನು ಪ್ರಕ್ರಿಯೆ ಒಳಪಡು ಎಂದು ಎಚ್ಚರಿಕೆ ನೀಡುತ್ತಿದ್ದೇನೆ. ಇನ್ನು ನನ್ನ ತಾಳ್ಮೆಯನ್ನು ಪರೀಕ್ಷಿಸಬಾರದು ಎಂದು ಬರೆದುಕೊಂಡಿದ್ದಾರೆ.
ಇದೊಂದು ರಾಜಕೀಯ ಪಿತೂರಿಯಾಗಿದ್ದು, ಇದನ್ನು ಸಮರ್ಥವಾಗಿ ಎದುರಿಸಬೇಕಿದೆ. ಇದಕ್ಕಾಗಿ ಯಾವುದೇ ಮುಲಾಜಿಲ್ಲದೇ ಪ್ರಜ್ವಲ್ ಬಂದು ಪೊಲೀಸರಿಗೆ ಶರಣಾಗಿ, ವಿಚಾರಣೆ ಎದುರಿಸಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ, ನನ್ನ, ಕುಟುಂಬದ ಕೋಪವನ್ನು ಎದುರಿಸಬೇಕಾಗುತ್ತದೆ. ಅವನು ಎಸಗಿದ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ನ್ಯಾಯಾಲಯವಿದೆ.
ನಾನಾಗಲಿ, ನಮ್ಮ ಕುಟುಂಬವಾಗಲಿ ಈ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಈ ಪ್ರಕಣದಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಿ, ಮರಳಿ ಜನರ ವಿಶ್ವಾಸವನ್ನು ಹಿಂಪಡೆಯುವುದೇ ನನ್ನ ಉದ್ದೇಶವಾಗಿದೆ ಎಂದು ನೋಟಿಸ್ ನೀಡಿದ್ದಾರೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…