ಬೆಂಗಳೂರು: ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿದೇಶದಲ್ಲಿ ಪ್ರಜ್ವಲ್ ತಲೆ ಮರೆಸಿಕೊಂಡಿರುವ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಹಲವಾರು ಕಾನೂನಾತ್ಮಕ ಕ್ರಮಗಳನ್ನು ಕೈಗೊಂಡಿದೆ.
ಸಿಎಂ ಸಿದ್ದರಾಮಯ್ಯ ಅವರು ಕೂಡಾ ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಎರಡು ಬಾರಿ ಪತ್ರವನ್ನು ಬರೆದಿದ್ದಾರೆ. ಇತ್ತ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ವಾಪಸಾತಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕೂಡಾ ಮನವಿ ಮಾಡಿದ್ದರು.
ಇದರ ಬೆನ್ನಲ್ಲೇ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಪ್ರಜ್ವಲ್ ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬಹಿರಂಗ ಪತ್ರವನ್ನು ಹಂಚಿಕೊಂಡಿರುವ ದೇವೇಗೌಡರು. ನಿನ್ನಿಂದ ಕುಟುಂಬ ಮಾನ ಹಾಳಾಗುತ್ತಿದೆ. ನೀನು ಎಲ್ಲೇ ಇದ್ದರೂ ಹಿಂತಿರುಗಿ ಬಂದು ಕಾನೂನು ಪ್ರಕ್ರಿಯೆ ಒಳಪಡು ಎಂದು ಎಚ್ಚರಿಕೆ ನೀಡುತ್ತಿದ್ದೇನೆ. ಇನ್ನು ನನ್ನ ತಾಳ್ಮೆಯನ್ನು ಪರೀಕ್ಷಿಸಬಾರದು ಎಂದು ಬರೆದುಕೊಂಡಿದ್ದಾರೆ.
ಇದೊಂದು ರಾಜಕೀಯ ಪಿತೂರಿಯಾಗಿದ್ದು, ಇದನ್ನು ಸಮರ್ಥವಾಗಿ ಎದುರಿಸಬೇಕಿದೆ. ಇದಕ್ಕಾಗಿ ಯಾವುದೇ ಮುಲಾಜಿಲ್ಲದೇ ಪ್ರಜ್ವಲ್ ಬಂದು ಪೊಲೀಸರಿಗೆ ಶರಣಾಗಿ, ವಿಚಾರಣೆ ಎದುರಿಸಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ, ನನ್ನ, ಕುಟುಂಬದ ಕೋಪವನ್ನು ಎದುರಿಸಬೇಕಾಗುತ್ತದೆ. ಅವನು ಎಸಗಿದ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ನ್ಯಾಯಾಲಯವಿದೆ.
ನಾನಾಗಲಿ, ನಮ್ಮ ಕುಟುಂಬವಾಗಲಿ ಈ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಈ ಪ್ರಕಣದಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಿ, ಮರಳಿ ಜನರ ವಿಶ್ವಾಸವನ್ನು ಹಿಂಪಡೆಯುವುದೇ ನನ್ನ ಉದ್ದೇಶವಾಗಿದೆ ಎಂದು ನೋಟಿಸ್ ನೀಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…