ರಾಜ್ಯ

ನಟ ಕಮಲ್ ಹಾಸನ್ ಸಮಸ್ತ ಕನ್ನಡಿಗರ ಕ್ಷಮೆ ಕೇಳಬೇಕು: ಜೆಡಿಎಸ್

ಬೆಂಗಳೂರು : ಕನ್ನಡದ ಬಗ್ಗೆ ಉದ್ಧಟತನದಿಂದ ಮಾತಾಡಿರುವ ಬಹುಭಾಷಾ ನಟ ಕಮಲ್ ಹಾಸನ್ ಸಮಸ್ತ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.

ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಮಲ್ ಹಾಸನ್ ಅವರೇ ನಿಮ್ಮ ಪ್ರಚಾರದ ತೆವಲಿಗೆ ಮತ್ತೊಂದು ಭಾಷೆಯನ್ನು ಹೀಯಾಳಿಸುವುದು ತರವೇ? ಬಹು ಭಾಷಾ ನಟರಾಗಿ ಇಂತಹ ಅಪ್ರಬುದ್ಧ ಹೇಳಿಕೆ ನೀಡುವುದು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ ಎಂದು ಆಕ್ಷೇಪಿಸಿದೆ.

ತಮಿಳು ಭಾಷೆಯ ಮೇಲಿನ ನಿಮ್ಮ ಅಭಿಮಾನವನ್ನು ತೋರ್ಪಡಿಸಲು ಕನ್ನಡಕ್ಕೆ ಅಪಮಾನಿಸುವುದನ್ನು ಕನ್ನಡಿಗರು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ದ್ರಾವಿಡ ಭಾಷೆಗಳಲ್ಲಿ ತಮಿಳಿನಂತೆ ಕನ್ನಡವೂ ಒಂದು ಸ್ವತಂತ್ರ ಭಾಷೆ. ಅತ್ಯಂತ ಪ್ರಾಚೀನ ಮತ್ತು ಶ್ರೀಮಂತ ಭಾಷೆ. ಕನ್ನಡ ವಿಶ್ವ ಲಿಪಿಗಳ ರಾಣಿ ಎಂಬುದನ್ನು ಇತಿಹಾಸ ತಜ್ಞರೇ ಒಪ್ಪಿದ್ದಾರೆ, ಮೆಚ್ಚಿದ್ದಾರೆ. ವಿಶ್ವದ ಅತ್ಯಂತ ಸುಂದರವಾದ ಭಾಷೆಗಳಲ್ಲಿ ಕನ್ನಡಕ್ಕೆ ಅಗ್ರಸ್ಥಾನವಿದೆ ಎಂದು ಜೆಡಿಎಸ್ ತರಾಟೆಗೆ ತೆಗೆದುಕೊಂಡಿದೆ.

ಭಾಷೆಯ ಬಗ್ಗೆ ಸರ್ಟಿಫಿಕೇಟ್ ಕೊಡಲು ನೀವೇನು ಭಾಷಾ ವಿಜ್ಞಾನಿಯೇ? ಭಾಷಾ ವಿಜ್ಞಾನ ಗೊತ್ತಿರದ ಅವಿವೇಕಿಗಳಿಂದ ಮಾತ್ರ ಇನ್ನೊಂದು ಭಾಷೆ ಬಗ್ಗೆ ಲಘುವಾಗಿ ಮಾತಾನಾಡಲು ಸಾಧ್ಯ. ಕನ್ನಡ ಭಾಷೆಯು ಸಾವಿರಾರು ವರ್ಷಗಳಿಗೂ ಹೆಚ್ಚು ಪುರಾತನವಾದ ಚಾರಿತ್ರಿಕ ಮತ್ತು ಐತಿಹಾಸಿಕ ಹಿನ್ನೆಲೆಯುಳ್ಳ ಭಾಷೆ ಎಂಬುದನ್ನು ತಾವು ಮೊದಲು ಅರಿಯಿರಿ ಎಂದಿರುವ ಜೆಡಿಎಸ್, ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದಿಲ್ಲ ಎಂಬ ನಾಣ್ನುಡಿಯನ್ನು ಉಲ್ಲೇಖಿಸಿದೆ.

ಆಂದೋಲನ ಡೆಸ್ಕ್

Recent Posts

ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ದುಪ್ಪಟ್ಟು ಹಣ ವಸೂಲಿ..!

ಪ್ರವಾಸಿಗರ ಅಸಮಾಧಾನ; ವಿಡಿಯೋ ವೈರಲ್ ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ಪ್ರವಾಸಿಗರಿಂದ ದುಪ್ಪಟ್ಟು…

3 mins ago

ವಿಶ್ವದರ್ಜೆ ಫುಟ್‌ಪಾತ್ ನಿರ್ಮಾಣಕ್ಕೆ ಪ್ಲಾನ್!

ಕೆ.ಬಿ.ರಮೇಶನಾಯಕ ಮೊದಲ ಹಂತದಲ್ಲಿ ಮೈಸೂರಿನ ಪ್ರಮುಖ ಮೂರು ರಸ್ತೆಗಳ ಗುರುತು ಮೈಸೂರು: ದೇಶದ ಪ್ರಮುಖ ಸ್ಮಾರ್ಟ್ ಸಿಟಿಗಳಲ್ಲಿ ನಿರ್ಮಾಣಗೊಂಡಿರುವ ವಿಶ್ವದರ್ಜೆಯ…

7 mins ago

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

9 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

10 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

10 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

11 hours ago