ರಾಜ್ಯ

ನಟ ಕಮಲ್ ಹಾಸನ್ ಸಮಸ್ತ ಕನ್ನಡಿಗರ ಕ್ಷಮೆ ಕೇಳಬೇಕು: ಜೆಡಿಎಸ್

ಬೆಂಗಳೂರು : ಕನ್ನಡದ ಬಗ್ಗೆ ಉದ್ಧಟತನದಿಂದ ಮಾತಾಡಿರುವ ಬಹುಭಾಷಾ ನಟ ಕಮಲ್ ಹಾಸನ್ ಸಮಸ್ತ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.

ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಮಲ್ ಹಾಸನ್ ಅವರೇ ನಿಮ್ಮ ಪ್ರಚಾರದ ತೆವಲಿಗೆ ಮತ್ತೊಂದು ಭಾಷೆಯನ್ನು ಹೀಯಾಳಿಸುವುದು ತರವೇ? ಬಹು ಭಾಷಾ ನಟರಾಗಿ ಇಂತಹ ಅಪ್ರಬುದ್ಧ ಹೇಳಿಕೆ ನೀಡುವುದು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ ಎಂದು ಆಕ್ಷೇಪಿಸಿದೆ.

ತಮಿಳು ಭಾಷೆಯ ಮೇಲಿನ ನಿಮ್ಮ ಅಭಿಮಾನವನ್ನು ತೋರ್ಪಡಿಸಲು ಕನ್ನಡಕ್ಕೆ ಅಪಮಾನಿಸುವುದನ್ನು ಕನ್ನಡಿಗರು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ದ್ರಾವಿಡ ಭಾಷೆಗಳಲ್ಲಿ ತಮಿಳಿನಂತೆ ಕನ್ನಡವೂ ಒಂದು ಸ್ವತಂತ್ರ ಭಾಷೆ. ಅತ್ಯಂತ ಪ್ರಾಚೀನ ಮತ್ತು ಶ್ರೀಮಂತ ಭಾಷೆ. ಕನ್ನಡ ವಿಶ್ವ ಲಿಪಿಗಳ ರಾಣಿ ಎಂಬುದನ್ನು ಇತಿಹಾಸ ತಜ್ಞರೇ ಒಪ್ಪಿದ್ದಾರೆ, ಮೆಚ್ಚಿದ್ದಾರೆ. ವಿಶ್ವದ ಅತ್ಯಂತ ಸುಂದರವಾದ ಭಾಷೆಗಳಲ್ಲಿ ಕನ್ನಡಕ್ಕೆ ಅಗ್ರಸ್ಥಾನವಿದೆ ಎಂದು ಜೆಡಿಎಸ್ ತರಾಟೆಗೆ ತೆಗೆದುಕೊಂಡಿದೆ.

ಭಾಷೆಯ ಬಗ್ಗೆ ಸರ್ಟಿಫಿಕೇಟ್ ಕೊಡಲು ನೀವೇನು ಭಾಷಾ ವಿಜ್ಞಾನಿಯೇ? ಭಾಷಾ ವಿಜ್ಞಾನ ಗೊತ್ತಿರದ ಅವಿವೇಕಿಗಳಿಂದ ಮಾತ್ರ ಇನ್ನೊಂದು ಭಾಷೆ ಬಗ್ಗೆ ಲಘುವಾಗಿ ಮಾತಾನಾಡಲು ಸಾಧ್ಯ. ಕನ್ನಡ ಭಾಷೆಯು ಸಾವಿರಾರು ವರ್ಷಗಳಿಗೂ ಹೆಚ್ಚು ಪುರಾತನವಾದ ಚಾರಿತ್ರಿಕ ಮತ್ತು ಐತಿಹಾಸಿಕ ಹಿನ್ನೆಲೆಯುಳ್ಳ ಭಾಷೆ ಎಂಬುದನ್ನು ತಾವು ಮೊದಲು ಅರಿಯಿರಿ ಎಂದಿರುವ ಜೆಡಿಎಸ್, ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದಿಲ್ಲ ಎಂಬ ನಾಣ್ನುಡಿಯನ್ನು ಉಲ್ಲೇಖಿಸಿದೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

47 mins ago

ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…

53 mins ago

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತಗಳಿಗೆ ಆಹ್ವಾನ

ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…

57 mins ago

ಅರ್ಜುನಹಳ್ಳಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…

1 hour ago

ಊರ ಜಾತ್ರೆ ಒಂದು ನೆನಪು…

ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ  ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…

1 hour ago

ಯುದ್ಧ: ಕಟ್ಟಡ ನಿರ್ಮಾಣ ವಲಯಕ್ಕೆ ಬೆಲೆ ಏರಿಕೆಯ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…

1 hour ago