chinaswamy
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಹೊರಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಆರ್ಸಿಬಿ ಗೆಲುವಿನಲ್ಲಿ ಪ್ರಚಾರ ಪಡೆಯಲು ಹೋಗಿ ಹಲವರ ಉಸಿರು ನಿಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಧಿಕ್ಕಾರ. ಕ್ರೀಡಾಂಗಣದಲ್ಲಿಯೇ ಆರ್ಸಿಬಿ ತಂಡದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಮಾಡಬಹುದಿತ್ತು. ಅದನ್ನು ಬಿಟ್ಟು ಕಾಂಗ್ರೆಸ್ ಸರ್ಕಾರ ವಿಧಾನಸೌಧದ ಮುಂದೆ ಆತುರಾತುರವಾಗಿ ಕಾರ್ಯಕ್ರಮ ಆಯೋಜಿಸಿ, ಆರ್ಸಿಬಿ ತಂಡದ ಜೊತೆ ಸಿಎಂ, ಡಿಸಿಎಂ, ಸಚಿವರು ಮತ್ತವರ ಮಕ್ಕಳ ಫೋಟೋಶೂಟ್ ಶೋಕಿಗೆ ಮುಗ್ಧರು ಪ್ರಾಣ ಕಳೆದುಕೊಂಡಿರುವುದು ಘೋರ ದುರಂತ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಹತ್ತಾರು ಸಾವಿರ ಸಂಖ್ಯೆಯಲ್ಲಿ ಆರ್ಸಿಬಿ ಅಭಿಮಾನಿಗಳು ಸೇರಿದ್ದ ವೇಳೆ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳದೇ ನಿರ್ಲಕ್ಷ್ಯ ತೋರಿರುವುದು ಕಾಂಗ್ರೆಸ್ ಸರ್ಕಾರ ವೈಫಲ್ಯವನ್ನು ಜಗಜ್ಜಾಹೀರುಗೊಳಿಸಿದೆ. ದುರಂತದಲ್ಲಿ 11 ಜನರ ಸಾವಿಗೆ ಡಿಸಿಎಂ ಡಿಕೆಶಿಯೇ ಹೊಣೆ ಹೊರಬೇಕು ಎಂದು ಆಗ್ರಹಿಸಿದೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…