ರಾಜ್ಯ

ರಾಜ್ಯ ಬಜೆಟ್‌ ಬಗ್ಗೆ ಸ್ವತಃ ಎಐಸಿಸಿ ಅಧ್ಯಕ್ಷರೇ ಬೇಸರ ವ್ಯಕ್ತಪಡಿಸಿದ್ದಾರೆ: ಜೆಡಿಎಸ್‌ ಟ್ವೀಟ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ತಾರತಮ್ಯದಿಂದ ಕೂಡಿದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷರೇ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಜೆಡಿಎಸ್‌ ಟ್ವೀಟ್‌ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಕಲ್ಯಾಣ ಪಥ ಯೋಜನೆಯ ಪ್ರಾರಂಭೋತ್ಸವ ಬಜೆಟ್‌ನಲ್ಲಿ ಅನುದಾನ ಹಂಚಿಕೆ, ಯೋಜನೆ ಘೋಷಣೆ ವಿಚಾರದಲ್ಲಿ ಉತ್ತರ ಕರ್ನಾಟಕದ ಜನತೆಗೆ ಮಹಾದ್ರೋಹವಾಗಿದೆ. ಕಲ್ಯಾಣ ಕರ್ನಾಟಕದ ಮಂದಿಗೆ ಅನ್ಯಾಯ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷರೇ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಬಹಿರಂಗ ವೇದಿಕೆಯಲ್ಲೇ‌ ಮಂಗಳಾರತಿ ಎತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ನಿಮ್ಮದು ತುಷ್ಟೀಕರಣದ ಬಜೆಟ್. ಕೆಲವರಿಗಾಗಿ ಬಹುಜನರ ಹಿತವನ್ನು ಮರೆತಿದ್ದೀರಿ ಎಂಬುದು ಸತ್ಯ. ಅದಕ್ಕೆ ಖರ್ಗೆಯವರ ಮಾತಿನ ಛಡಿ ಏಟುಗಳೇ ಸಾಕ್ಷಿಯಾಗಿದೆ ಎಂದು ತಿರುಗೇಟು ನೀಡಿದೆ.

ಕೇವಲ ಉರ್ದು ಭಾಷೆಯಲ್ಲಿ ಶಿಕ್ಷಣ ಪಡೆದರೇ ಕನ್ನಡದಲ್ಲಿ ಆಡಳಿತ ನಡೆಸಲು ಸಾಧ್ಯವಾಗುತ್ತದೆಯೇ?

ಕನ್ನಡಕ್ಕೆ ಪ್ರಥಮ ಆದ್ಯತೆ , ಕನ್ನಡವೇ ಆಡಳಿತ ಭಾಷೆ ಎಂದು ಪುಂಗಿ ಬಿಡುತ್ತಲೇ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ 100 ಉರ್ದು ಶಾಲೆಗಳನ್ನು ಪಬ್ಲಿಕ್‌ ಶಾಲೆ ಮಾದರಿಯಲ್ಲಿ ಹೈಟೆಕ್‌ ಮಾಡುತ್ತಿದ್ದಾರೆ.

ಕನ್ನಡವೇ ಗೊತ್ತಿಲ್ಲದ, ಕನ್ನಡ ಓದಲು, ಬರೆಯಲು ಬಾರದ, ಕೇವಲ ಉರ್ದು ಭಾಷೆಯಲ್ಲಿ ಶಿಕ್ಷಣ ಪಡೆದರೇ ಕನ್ನಡದಲ್ಲಿ ಆಡಳಿತ ನಡೆಸಲು ಸಾಧ್ಯವಾಗುತ್ತದೆಯೇ? ಇದರಿಂದ ಕನ್ನಡ ಭಾಷೆ ಉಳಿಯುತ್ತದೆಯೇ ? ಮತಬ್ಯಾಂಕ್‌ಗಾಗಿ ಒಂದು ಸಮುದಾಯವನ್ನು ಅತಿಯಾಗಿ ಓಲೈಕೆ ಮಾಡುತ್ತಿರುವ ಸಿದ್ದರಾಮಯ್ಯ ಉರ್ದುರಾಮಯ್ಯ, ಆಗಿ ಬದಲಾಗಿ ಕನ್ನಡಭಾಷೆಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

ರಾಜ್ಯದಲ್ಲಿ ಈಗಾಗಲೇ ಸಾವಿರಾರು ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸಾವಿರಾರು ಸರ್ಕಾರಿ ಶಾಲೆಗಳನ್ನು ದುರಸ್ತಿಮಾಡಲು ಸರ್ಕಾರದ ಬಳಿ ದುಡ್ಡಿಲ್ಲದೇ, ಮರಗಳ ನೆರಳಿನಲ್ಲಿ ವಿದ್ಯಾರ್ಥಿಗಳು ಓದುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ ಸರ್ಕಾರ ಬಜೆಟ್‌ ನಲ್ಲಿ 100 ಹೈಟೆಕ್ ಉರ್ದು ಶಾಲೆಯ ಘೋಷಣೆ ಕನ್ನಡಕ್ಕೆ ಹಾಗೂ ಕನ್ನಡ ಭಾಷಿಕರ ಮೇಲೆ ಮಾಡುತ್ತಿರುವ ಗಧಾ ಪ್ರಹಾರ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಕಿಡಿಕಾರಿದೆ.

ಅರ್ಚನ ಎಸ್‌ ಎಸ್

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

3 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

4 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

5 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

5 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

6 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

6 hours ago