ರಾಜ್ಯ

ರಾಜ್ಯ ಬಜೆಟ್‌ ಬಗ್ಗೆ ಸ್ವತಃ ಎಐಸಿಸಿ ಅಧ್ಯಕ್ಷರೇ ಬೇಸರ ವ್ಯಕ್ತಪಡಿಸಿದ್ದಾರೆ: ಜೆಡಿಎಸ್‌ ಟ್ವೀಟ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ತಾರತಮ್ಯದಿಂದ ಕೂಡಿದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷರೇ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಜೆಡಿಎಸ್‌ ಟ್ವೀಟ್‌ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಕಲ್ಯಾಣ ಪಥ ಯೋಜನೆಯ ಪ್ರಾರಂಭೋತ್ಸವ ಬಜೆಟ್‌ನಲ್ಲಿ ಅನುದಾನ ಹಂಚಿಕೆ, ಯೋಜನೆ ಘೋಷಣೆ ವಿಚಾರದಲ್ಲಿ ಉತ್ತರ ಕರ್ನಾಟಕದ ಜನತೆಗೆ ಮಹಾದ್ರೋಹವಾಗಿದೆ. ಕಲ್ಯಾಣ ಕರ್ನಾಟಕದ ಮಂದಿಗೆ ಅನ್ಯಾಯ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷರೇ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಬಹಿರಂಗ ವೇದಿಕೆಯಲ್ಲೇ‌ ಮಂಗಳಾರತಿ ಎತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ನಿಮ್ಮದು ತುಷ್ಟೀಕರಣದ ಬಜೆಟ್. ಕೆಲವರಿಗಾಗಿ ಬಹುಜನರ ಹಿತವನ್ನು ಮರೆತಿದ್ದೀರಿ ಎಂಬುದು ಸತ್ಯ. ಅದಕ್ಕೆ ಖರ್ಗೆಯವರ ಮಾತಿನ ಛಡಿ ಏಟುಗಳೇ ಸಾಕ್ಷಿಯಾಗಿದೆ ಎಂದು ತಿರುಗೇಟು ನೀಡಿದೆ.

ಕೇವಲ ಉರ್ದು ಭಾಷೆಯಲ್ಲಿ ಶಿಕ್ಷಣ ಪಡೆದರೇ ಕನ್ನಡದಲ್ಲಿ ಆಡಳಿತ ನಡೆಸಲು ಸಾಧ್ಯವಾಗುತ್ತದೆಯೇ?

ಕನ್ನಡಕ್ಕೆ ಪ್ರಥಮ ಆದ್ಯತೆ , ಕನ್ನಡವೇ ಆಡಳಿತ ಭಾಷೆ ಎಂದು ಪುಂಗಿ ಬಿಡುತ್ತಲೇ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ 100 ಉರ್ದು ಶಾಲೆಗಳನ್ನು ಪಬ್ಲಿಕ್‌ ಶಾಲೆ ಮಾದರಿಯಲ್ಲಿ ಹೈಟೆಕ್‌ ಮಾಡುತ್ತಿದ್ದಾರೆ.

ಕನ್ನಡವೇ ಗೊತ್ತಿಲ್ಲದ, ಕನ್ನಡ ಓದಲು, ಬರೆಯಲು ಬಾರದ, ಕೇವಲ ಉರ್ದು ಭಾಷೆಯಲ್ಲಿ ಶಿಕ್ಷಣ ಪಡೆದರೇ ಕನ್ನಡದಲ್ಲಿ ಆಡಳಿತ ನಡೆಸಲು ಸಾಧ್ಯವಾಗುತ್ತದೆಯೇ? ಇದರಿಂದ ಕನ್ನಡ ಭಾಷೆ ಉಳಿಯುತ್ತದೆಯೇ ? ಮತಬ್ಯಾಂಕ್‌ಗಾಗಿ ಒಂದು ಸಮುದಾಯವನ್ನು ಅತಿಯಾಗಿ ಓಲೈಕೆ ಮಾಡುತ್ತಿರುವ ಸಿದ್ದರಾಮಯ್ಯ ಉರ್ದುರಾಮಯ್ಯ, ಆಗಿ ಬದಲಾಗಿ ಕನ್ನಡಭಾಷೆಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

ರಾಜ್ಯದಲ್ಲಿ ಈಗಾಗಲೇ ಸಾವಿರಾರು ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸಾವಿರಾರು ಸರ್ಕಾರಿ ಶಾಲೆಗಳನ್ನು ದುರಸ್ತಿಮಾಡಲು ಸರ್ಕಾರದ ಬಳಿ ದುಡ್ಡಿಲ್ಲದೇ, ಮರಗಳ ನೆರಳಿನಲ್ಲಿ ವಿದ್ಯಾರ್ಥಿಗಳು ಓದುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ ಸರ್ಕಾರ ಬಜೆಟ್‌ ನಲ್ಲಿ 100 ಹೈಟೆಕ್ ಉರ್ದು ಶಾಲೆಯ ಘೋಷಣೆ ಕನ್ನಡಕ್ಕೆ ಹಾಗೂ ಕನ್ನಡ ಭಾಷಿಕರ ಮೇಲೆ ಮಾಡುತ್ತಿರುವ ಗಧಾ ಪ್ರಹಾರ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಕಿಡಿಕಾರಿದೆ.

ಅರ್ಚನ ಎಸ್‌ ಎಸ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

8 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

8 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

8 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

8 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

9 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago