ರಾಜ್ಯ

ಸ್ಯಾಂಡಲ್‌ವುಡ್‌ ಕಲಾವಿದರಿಗೆ ವಾರ್ನಿಂಗ್‌ ವಿಚಾರ| ವಿನಾಶ ಕಾಲೇ ವಿಪರೀತ ಬುದ್ಧಿ: ಡಿಕೆಶಿಗೆ ಟಾಂಗ್‌ ಕೊಟ್ಟ ಜೆಡಿಎಸ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ಯಾಂಡಲ್‌ವುಡ್‌ ಕಲಾವಿದರಿಗೆ ವಾರ್ನಿಂಗ್‌ ನೀಡಿದ ವಿಚಾರವೂ ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಕಾಣುತ್ತಿದೆ ಎಂದು ಜೆಡಿಎಸ್‌ ಪಕ್ಷ ಟಾಂಗ್‌ ಕೊಟ್ಟಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷವೂ ರೌಡಿ ಕೊತ್ವಾಲನ ಶಿಷ್ಯ ಡಿಕೆಶಿ ನಡೆದು ಬಂದ ದಾರಿ, ಬೆಳೆದು ಬಂದ ಪರಿಸರ, ಜೊತೆಗಿದ್ದವರ ಸಹವಾಸವೇ ಅಂತಹದ್ದು. ಮಿಸ್ಟರ್ ಡಿ.ಕೆ.ಶಿವಕುಮಾರ್, ನಿಮ್ಮ ಪಾದಯಾತ್ರೆ ರಾಜಕೀಯ ಪ್ರೇರಿತವಾಗಿತ್ತು. ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಭಾಗವಹಿಸಲಿಲ್ಲ ಎಂದು ಕನ್ನಡದ ನಟರಿಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ವೇದಿಕೆಯಲ್ಲಿ ಬೆದರಿಕೆ ಹಾಕಿರುವುದು ಹೇಡಿತನ ಮತ್ತು ಖಂಡನೀಯ ಎಂದು ವಾಗ್ದಾಳಿ ನಡೆಸಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಈ ಗೊಡ್ಡು ಬೆದರಿಕೆ ನಿಮ್ಮ ಹತಾಶೆ ಮತ್ತು ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವುದನ್ನು ತೋರಿಸುತ್ತಿದೆ. ಕನ್ನಡ ಚಿತ್ರರಂಗ ಹಾಗೂ ಸಿನಿಮಾ ಕಲಾವಿದರು ಯಾವುದೇ ಪಕ್ಷದ ಕಾಲಾಳುಗಳಲ್ಲ. ಅವರು ಯಾರನ್ನು , ಯಾವ ಪಕ್ಷವನ್ನು ಬೆಂಬಲಿಸಬೇಕು ? ಎನ್ನುವುದು ಅವರ ವಯಕ್ತಿಕ ತೀರ್ಮಾನ ಎಂದು ಹೇಳಿದೆ.

ನಮ್ಮದು ಪ್ರಜಾಪ್ರಭುತ್ವ, ಸಂವಿಧಾನದ ಅಡಿಯಲ್ಲಿ ನೀವು ಡಿಸಿಎಂ ಆಗಿದ್ದೀರಿ. ರೌಡಿಸಂ, ಧಮ್ಕಿ ರಾಜಕೀಯ ಯಾರಿಗೂ ಶೋಭೆ ತರುವುದಿಲ್ಲ. ಕನಕಪುರವನ್ನು ರಿಪಬ್ಲಿಕ್ ಮಾಡಿಕೊಂಡು ದರ್ಪ, ದೌರ್ಜನ್ಯ, ಬೆದರಿಕೆ ಹಾಕಿ ಜನರನ್ನು ಹಿಂಸಿಸುತ್ತಾ, ಬಂಡೆಗಳನ್ನು ಖಾಲಿ ಮಾಡಿರುವ ಅಪೂರ್ವ ಸಹೋದರರಿಗೆ ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹಾಗೂ‌‌ ಬೆಂ.ಗ್ರಾಮಾಂತರದಲ್ಲಿ ನಿಮ್ಮ ಸಹೋದರನಿಗೆ ನಟ್ಟು, ಬೋಲ್ಟು ಸರಿಮಾಡಿದ್ದಾರೆ ಎಂದು ತಿರುಗೇಟು ನೀಡಿದೆ.

ಇನ್ನೂ ಸಿಎಂ ಕುರ್ಚಿಗೆ ಏರಲು ತಿರುಕನ ಕನಸು ಕಾಣುತ್ತಾ ಅಡ್ಡದಾರಿ, ತಂತ್ರ ಕುತಂತ್ರ ವಾಮಮಾರ್ಗದಲ್ಲಿ ಸಾಗಿರುವ ನಿನಗೆ ಕಾಂಗ್ರೆಸ್ ಪಾರ್ಟಿಯವರೇ ನಟ್ಟು, ಬೋಲ್ಟು ಟೈಟು ಮಾಡುತ್ತಿದ್ದಾರೆ ಅಷ್ಟು ಸಾಲದೇ ಎಂದು ವ್ಯಂಗ್ಯ ಮಾಡಿದೆ.

ಅರ್ಚನ ಎಸ್‌ ಎಸ್

Recent Posts

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

3 mins ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

34 mins ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

4 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

4 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

4 hours ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

4 hours ago