ರಾಜ್ಯ

ಸ್ಯಾಂಡಲ್‌ವುಡ್‌ ಕಲಾವಿದರಿಗೆ ವಾರ್ನಿಂಗ್‌ ವಿಚಾರ| ವಿನಾಶ ಕಾಲೇ ವಿಪರೀತ ಬುದ್ಧಿ: ಡಿಕೆಶಿಗೆ ಟಾಂಗ್‌ ಕೊಟ್ಟ ಜೆಡಿಎಸ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ಯಾಂಡಲ್‌ವುಡ್‌ ಕಲಾವಿದರಿಗೆ ವಾರ್ನಿಂಗ್‌ ನೀಡಿದ ವಿಚಾರವೂ ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಕಾಣುತ್ತಿದೆ ಎಂದು ಜೆಡಿಎಸ್‌ ಪಕ್ಷ ಟಾಂಗ್‌ ಕೊಟ್ಟಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷವೂ ರೌಡಿ ಕೊತ್ವಾಲನ ಶಿಷ್ಯ ಡಿಕೆಶಿ ನಡೆದು ಬಂದ ದಾರಿ, ಬೆಳೆದು ಬಂದ ಪರಿಸರ, ಜೊತೆಗಿದ್ದವರ ಸಹವಾಸವೇ ಅಂತಹದ್ದು. ಮಿಸ್ಟರ್ ಡಿ.ಕೆ.ಶಿವಕುಮಾರ್, ನಿಮ್ಮ ಪಾದಯಾತ್ರೆ ರಾಜಕೀಯ ಪ್ರೇರಿತವಾಗಿತ್ತು. ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಭಾಗವಹಿಸಲಿಲ್ಲ ಎಂದು ಕನ್ನಡದ ನಟರಿಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ವೇದಿಕೆಯಲ್ಲಿ ಬೆದರಿಕೆ ಹಾಕಿರುವುದು ಹೇಡಿತನ ಮತ್ತು ಖಂಡನೀಯ ಎಂದು ವಾಗ್ದಾಳಿ ನಡೆಸಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಈ ಗೊಡ್ಡು ಬೆದರಿಕೆ ನಿಮ್ಮ ಹತಾಶೆ ಮತ್ತು ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವುದನ್ನು ತೋರಿಸುತ್ತಿದೆ. ಕನ್ನಡ ಚಿತ್ರರಂಗ ಹಾಗೂ ಸಿನಿಮಾ ಕಲಾವಿದರು ಯಾವುದೇ ಪಕ್ಷದ ಕಾಲಾಳುಗಳಲ್ಲ. ಅವರು ಯಾರನ್ನು , ಯಾವ ಪಕ್ಷವನ್ನು ಬೆಂಬಲಿಸಬೇಕು ? ಎನ್ನುವುದು ಅವರ ವಯಕ್ತಿಕ ತೀರ್ಮಾನ ಎಂದು ಹೇಳಿದೆ.

ನಮ್ಮದು ಪ್ರಜಾಪ್ರಭುತ್ವ, ಸಂವಿಧಾನದ ಅಡಿಯಲ್ಲಿ ನೀವು ಡಿಸಿಎಂ ಆಗಿದ್ದೀರಿ. ರೌಡಿಸಂ, ಧಮ್ಕಿ ರಾಜಕೀಯ ಯಾರಿಗೂ ಶೋಭೆ ತರುವುದಿಲ್ಲ. ಕನಕಪುರವನ್ನು ರಿಪಬ್ಲಿಕ್ ಮಾಡಿಕೊಂಡು ದರ್ಪ, ದೌರ್ಜನ್ಯ, ಬೆದರಿಕೆ ಹಾಕಿ ಜನರನ್ನು ಹಿಂಸಿಸುತ್ತಾ, ಬಂಡೆಗಳನ್ನು ಖಾಲಿ ಮಾಡಿರುವ ಅಪೂರ್ವ ಸಹೋದರರಿಗೆ ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹಾಗೂ‌‌ ಬೆಂ.ಗ್ರಾಮಾಂತರದಲ್ಲಿ ನಿಮ್ಮ ಸಹೋದರನಿಗೆ ನಟ್ಟು, ಬೋಲ್ಟು ಸರಿಮಾಡಿದ್ದಾರೆ ಎಂದು ತಿರುಗೇಟು ನೀಡಿದೆ.

ಇನ್ನೂ ಸಿಎಂ ಕುರ್ಚಿಗೆ ಏರಲು ತಿರುಕನ ಕನಸು ಕಾಣುತ್ತಾ ಅಡ್ಡದಾರಿ, ತಂತ್ರ ಕುತಂತ್ರ ವಾಮಮಾರ್ಗದಲ್ಲಿ ಸಾಗಿರುವ ನಿನಗೆ ಕಾಂಗ್ರೆಸ್ ಪಾರ್ಟಿಯವರೇ ನಟ್ಟು, ಬೋಲ್ಟು ಟೈಟು ಮಾಡುತ್ತಿದ್ದಾರೆ ಅಷ್ಟು ಸಾಲದೇ ಎಂದು ವ್ಯಂಗ್ಯ ಮಾಡಿದೆ.

ಅರ್ಚನ ಎಸ್‌ ಎಸ್

Recent Posts

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

1 hour ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 hours ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

3 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

6 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

8 hours ago