ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಯಾಂಡಲ್ವುಡ್ ಕಲಾವಿದರಿಗೆ ವಾರ್ನಿಂಗ್ ನೀಡಿದ ವಿಚಾರವೂ ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಕಾಣುತ್ತಿದೆ ಎಂದು ಜೆಡಿಎಸ್ ಪಕ್ಷ ಟಾಂಗ್ ಕೊಟ್ಟಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವೂ ರೌಡಿ ಕೊತ್ವಾಲನ ಶಿಷ್ಯ ಡಿಕೆಶಿ ನಡೆದು ಬಂದ ದಾರಿ, ಬೆಳೆದು ಬಂದ ಪರಿಸರ, ಜೊತೆಗಿದ್ದವರ ಸಹವಾಸವೇ ಅಂತಹದ್ದು. ಮಿಸ್ಟರ್ ಡಿ.ಕೆ.ಶಿವಕುಮಾರ್, ನಿಮ್ಮ ಪಾದಯಾತ್ರೆ ರಾಜಕೀಯ ಪ್ರೇರಿತವಾಗಿತ್ತು. ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಭಾಗವಹಿಸಲಿಲ್ಲ ಎಂದು ಕನ್ನಡದ ನಟರಿಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ವೇದಿಕೆಯಲ್ಲಿ ಬೆದರಿಕೆ ಹಾಕಿರುವುದು ಹೇಡಿತನ ಮತ್ತು ಖಂಡನೀಯ ಎಂದು ವಾಗ್ದಾಳಿ ನಡೆಸಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಈ ಗೊಡ್ಡು ಬೆದರಿಕೆ ನಿಮ್ಮ ಹತಾಶೆ ಮತ್ತು ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವುದನ್ನು ತೋರಿಸುತ್ತಿದೆ. ಕನ್ನಡ ಚಿತ್ರರಂಗ ಹಾಗೂ ಸಿನಿಮಾ ಕಲಾವಿದರು ಯಾವುದೇ ಪಕ್ಷದ ಕಾಲಾಳುಗಳಲ್ಲ. ಅವರು ಯಾರನ್ನು , ಯಾವ ಪಕ್ಷವನ್ನು ಬೆಂಬಲಿಸಬೇಕು ? ಎನ್ನುವುದು ಅವರ ವಯಕ್ತಿಕ ತೀರ್ಮಾನ ಎಂದು ಹೇಳಿದೆ.
ನಮ್ಮದು ಪ್ರಜಾಪ್ರಭುತ್ವ, ಸಂವಿಧಾನದ ಅಡಿಯಲ್ಲಿ ನೀವು ಡಿಸಿಎಂ ಆಗಿದ್ದೀರಿ. ರೌಡಿಸಂ, ಧಮ್ಕಿ ರಾಜಕೀಯ ಯಾರಿಗೂ ಶೋಭೆ ತರುವುದಿಲ್ಲ. ಕನಕಪುರವನ್ನು ರಿಪಬ್ಲಿಕ್ ಮಾಡಿಕೊಂಡು ದರ್ಪ, ದೌರ್ಜನ್ಯ, ಬೆದರಿಕೆ ಹಾಕಿ ಜನರನ್ನು ಹಿಂಸಿಸುತ್ತಾ, ಬಂಡೆಗಳನ್ನು ಖಾಲಿ ಮಾಡಿರುವ ಅಪೂರ್ವ ಸಹೋದರರಿಗೆ ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಬೆಂ.ಗ್ರಾಮಾಂತರದಲ್ಲಿ ನಿಮ್ಮ ಸಹೋದರನಿಗೆ ನಟ್ಟು, ಬೋಲ್ಟು ಸರಿಮಾಡಿದ್ದಾರೆ ಎಂದು ತಿರುಗೇಟು ನೀಡಿದೆ.
ಇನ್ನೂ ಸಿಎಂ ಕುರ್ಚಿಗೆ ಏರಲು ತಿರುಕನ ಕನಸು ಕಾಣುತ್ತಾ ಅಡ್ಡದಾರಿ, ತಂತ್ರ ಕುತಂತ್ರ ವಾಮಮಾರ್ಗದಲ್ಲಿ ಸಾಗಿರುವ ನಿನಗೆ ಕಾಂಗ್ರೆಸ್ ಪಾರ್ಟಿಯವರೇ ನಟ್ಟು, ಬೋಲ್ಟು ಟೈಟು ಮಾಡುತ್ತಿದ್ದಾರೆ ಅಷ್ಟು ಸಾಲದೇ ಎಂದು ವ್ಯಂಗ್ಯ ಮಾಡಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…