ರಾಜ್ಯ

ಸ್ಯಾಂಡಲ್‌ವುಡ್‌ ಕಲಾವಿದರಿಗೆ ವಾರ್ನಿಂಗ್‌ ವಿಚಾರ| ವಿನಾಶ ಕಾಲೇ ವಿಪರೀತ ಬುದ್ಧಿ: ಡಿಕೆಶಿಗೆ ಟಾಂಗ್‌ ಕೊಟ್ಟ ಜೆಡಿಎಸ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ಯಾಂಡಲ್‌ವುಡ್‌ ಕಲಾವಿದರಿಗೆ ವಾರ್ನಿಂಗ್‌ ನೀಡಿದ ವಿಚಾರವೂ ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಕಾಣುತ್ತಿದೆ ಎಂದು ಜೆಡಿಎಸ್‌ ಪಕ್ಷ ಟಾಂಗ್‌ ಕೊಟ್ಟಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷವೂ ರೌಡಿ ಕೊತ್ವಾಲನ ಶಿಷ್ಯ ಡಿಕೆಶಿ ನಡೆದು ಬಂದ ದಾರಿ, ಬೆಳೆದು ಬಂದ ಪರಿಸರ, ಜೊತೆಗಿದ್ದವರ ಸಹವಾಸವೇ ಅಂತಹದ್ದು. ಮಿಸ್ಟರ್ ಡಿ.ಕೆ.ಶಿವಕುಮಾರ್, ನಿಮ್ಮ ಪಾದಯಾತ್ರೆ ರಾಜಕೀಯ ಪ್ರೇರಿತವಾಗಿತ್ತು. ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಭಾಗವಹಿಸಲಿಲ್ಲ ಎಂದು ಕನ್ನಡದ ನಟರಿಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ವೇದಿಕೆಯಲ್ಲಿ ಬೆದರಿಕೆ ಹಾಕಿರುವುದು ಹೇಡಿತನ ಮತ್ತು ಖಂಡನೀಯ ಎಂದು ವಾಗ್ದಾಳಿ ನಡೆಸಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಈ ಗೊಡ್ಡು ಬೆದರಿಕೆ ನಿಮ್ಮ ಹತಾಶೆ ಮತ್ತು ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವುದನ್ನು ತೋರಿಸುತ್ತಿದೆ. ಕನ್ನಡ ಚಿತ್ರರಂಗ ಹಾಗೂ ಸಿನಿಮಾ ಕಲಾವಿದರು ಯಾವುದೇ ಪಕ್ಷದ ಕಾಲಾಳುಗಳಲ್ಲ. ಅವರು ಯಾರನ್ನು , ಯಾವ ಪಕ್ಷವನ್ನು ಬೆಂಬಲಿಸಬೇಕು ? ಎನ್ನುವುದು ಅವರ ವಯಕ್ತಿಕ ತೀರ್ಮಾನ ಎಂದು ಹೇಳಿದೆ.

ನಮ್ಮದು ಪ್ರಜಾಪ್ರಭುತ್ವ, ಸಂವಿಧಾನದ ಅಡಿಯಲ್ಲಿ ನೀವು ಡಿಸಿಎಂ ಆಗಿದ್ದೀರಿ. ರೌಡಿಸಂ, ಧಮ್ಕಿ ರಾಜಕೀಯ ಯಾರಿಗೂ ಶೋಭೆ ತರುವುದಿಲ್ಲ. ಕನಕಪುರವನ್ನು ರಿಪಬ್ಲಿಕ್ ಮಾಡಿಕೊಂಡು ದರ್ಪ, ದೌರ್ಜನ್ಯ, ಬೆದರಿಕೆ ಹಾಕಿ ಜನರನ್ನು ಹಿಂಸಿಸುತ್ತಾ, ಬಂಡೆಗಳನ್ನು ಖಾಲಿ ಮಾಡಿರುವ ಅಪೂರ್ವ ಸಹೋದರರಿಗೆ ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹಾಗೂ‌‌ ಬೆಂ.ಗ್ರಾಮಾಂತರದಲ್ಲಿ ನಿಮ್ಮ ಸಹೋದರನಿಗೆ ನಟ್ಟು, ಬೋಲ್ಟು ಸರಿಮಾಡಿದ್ದಾರೆ ಎಂದು ತಿರುಗೇಟು ನೀಡಿದೆ.

ಇನ್ನೂ ಸಿಎಂ ಕುರ್ಚಿಗೆ ಏರಲು ತಿರುಕನ ಕನಸು ಕಾಣುತ್ತಾ ಅಡ್ಡದಾರಿ, ತಂತ್ರ ಕುತಂತ್ರ ವಾಮಮಾರ್ಗದಲ್ಲಿ ಸಾಗಿರುವ ನಿನಗೆ ಕಾಂಗ್ರೆಸ್ ಪಾರ್ಟಿಯವರೇ ನಟ್ಟು, ಬೋಲ್ಟು ಟೈಟು ಮಾಡುತ್ತಿದ್ದಾರೆ ಅಷ್ಟು ಸಾಲದೇ ಎಂದು ವ್ಯಂಗ್ಯ ಮಾಡಿದೆ.

ಅರ್ಚನ ಎಸ್‌ ಎಸ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

15 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

15 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

18 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

20 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

2 days ago