ರಾಜ್ಯ

ಡಿಸಿಎಂ ಅಧಿಕಾರಕ್ಕಾಗಿ ಒಕ್ಕಲಿಗ ಸಮುದಾಯ ಪೆನ್ನು ಪೇಪರ್ ಹಿಡಿದು ಭಿಕ್ಷೆ ಬೇಡಿದ್ದರು: ಜೆಡಿಎಸ್‌ ಕಿಡಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅಧಿಕಾರಕ್ಕಾಗಿ ಒಕ್ಕಲಿಗ ಸಮುದಾಯದ ಮುಂದೆ ಪೆನ್ನು ಪೇಪರ್‌ ಭಿಕ್ಷೆ ಬೇಡಿದ ನಿಮಗೆ ಈಗ ಸಮುದಾಯ ಕಾಲ ಕಸವಾಗಿದೆ. ಈಗಲಾದರೂ ನಿಮ್ಮ ಸಿಎಂ ಹಾಗೂ ಸಚಿವರುಗಳಿಗೆ ಬುದ್ಧಿ ಹೇಳುವ ಕನಿಷ್ಠ ಧೈರ್ಯ ಮಾಡಿ ಎಂದು ಜೆಡಿಎಸ್‌ ಪಕ್ಷ ಕಿಡಿಕಾರಿದೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ನಿಮ್ಮ ಸರ್ಕಾರ ಮಾಡಿಬಿಟ್ಟ ಅಪಚಾರ ಮುಚ್ಚಿಟ್ಟುಕೊಳ್ಳಲು ಒಕ್ಕಲಿಗ ಸಮುದಾಯ ಮತ್ತು ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ಯಾಕೆ ಕೆಸರೆರೆಚುತ್ತಿದ್ದೀರಿ? ಸ್ವಾಮೀಜಿ ಅವರ ಮೇಲೆ ನೀವು ಎಫ್ಐಆರ್ ಹಾಕಿದ್ದು ಈಗ ಸಮುದಾಯದ ಸಿಟ್ಟಿಗೆ ಕಾರಣವಾಗಿದೆ. ಒಕ್ಕಲಿಗರ ಆಕ್ರೋಶಕ್ಕೆ ನೀವು ಗುರಿಯಾಗಿದ್ದೀರಿ. ಬೀಸುವ ದೊಣ್ಣೆಯಿಂದ ಪಾರಾಗಲು ಜೆಡಿಎಸ್ ಬಗ್ಗೆ ಹೊಸ ಹುಳುಕು ಹುಡುಕುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದೆ.

ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಮೇಲೆ ಕೇಸ್‌ ಕಲಾಗಿತ್ತು ಎಂದು ನೀವು ಬಡಬಡಿಸಿದ್ದೀರಿ! ಹಳೆಯ ವಿಷಯ ಕೆದಕಿದ ನಿಮಗೆ ಆ ಪ್ರಕರಣ ಏನು? ಅದು ಮುಂದೇನಾಯಿತು? ಎನ್ನುವ ಮಾಹಿತಿ ಇಲ್ಲವೇ? ಆ ಪ್ರಕರಣಕ್ಕೂ ಜೆಡಿಎಸ್ ಪಕ್ಷಕ್ಕೂ ಸಂಬಂಧ ಏನು? ಮುಂದೆ ಆ ಪ್ರಕರಣ ರದ್ದಾಯಿತು, ನಿಮಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದೆ.

ಚಂದ್ರಶೇಖರ ಸ್ವಾಮೀಜಿ ಅವರ ವಿರುದ್ಧ ನಿಮ್ಮ ಇಡೀ ಕಾಂಗ್ರೆಸ್‌ ಸರ್ಕಾರವೇ ತೊಡೆತಟ್ಟಿ ನಿಂತಿದ್ದು, ಸಚಿವರುಗಳೆಲ್ಲಾ ಅವರ ಮೇಲೆ ರಕ್ಕಸರಂತೆ ಮುಗಿಬಿದ್ದಿದ್ದಾರೆ. ಅವರ ಹೇಳಿಕೆಯ ಬಗ್ಗೆ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ ಮೇಲೆಯೂ ಅವರ ಮೇಲೆ ಸರ್ಕಾರ ಯಾರದೋ ನಿರ್ದಿಷ್ಟ ಚಿತಾವಣೆಗೆ ಒಳಗಾಗಿ ಕಾಲು ಕೆರೆದು ಜಗಳಕ್ಕೆ ನಿಂತಿದೆ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅಪಮಾನಕರವಾಗಿ ವರ್ತಿಸುತ್ತಿದೆ. ಓಲೈಕೆ ರಾಜಕೀಯ, ತುಷ್ಟೀಕರಣದ ಪರಾಕಾಷ್ಠೆ ಇದು. ಒಕ್ಕಲಿಗರಿಗೆ ಇದೆಲ್ಲಾ ಅರ್ಥವಾಗುತ್ತಿದೆ ಎಂದು ಹೇಳಿದೆ.

ಅರ್ಚನ ಎಸ್‌ ಎಸ್

Recent Posts

ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್‌ ಟ್ರೋಫಿಗೆ ಚಾಲನೆ

ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…

1 hour ago

ಹಲವು ಹೊಸ ದಾಖಲೆಗಳಿಗೆ ಷರಾ ಬರೆದ 2025

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…

1 hour ago

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

2 hours ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

10 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

14 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

14 hours ago