ರಾಜ್ಯ

ಡಿಸಿಎಂ ಅಧಿಕಾರಕ್ಕಾಗಿ ಒಕ್ಕಲಿಗ ಸಮುದಾಯ ಪೆನ್ನು ಪೇಪರ್ ಹಿಡಿದು ಭಿಕ್ಷೆ ಬೇಡಿದ್ದರು: ಜೆಡಿಎಸ್‌ ಕಿಡಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅಧಿಕಾರಕ್ಕಾಗಿ ಒಕ್ಕಲಿಗ ಸಮುದಾಯದ ಮುಂದೆ ಪೆನ್ನು ಪೇಪರ್‌ ಭಿಕ್ಷೆ ಬೇಡಿದ ನಿಮಗೆ ಈಗ ಸಮುದಾಯ ಕಾಲ ಕಸವಾಗಿದೆ. ಈಗಲಾದರೂ ನಿಮ್ಮ ಸಿಎಂ ಹಾಗೂ ಸಚಿವರುಗಳಿಗೆ ಬುದ್ಧಿ ಹೇಳುವ ಕನಿಷ್ಠ ಧೈರ್ಯ ಮಾಡಿ ಎಂದು ಜೆಡಿಎಸ್‌ ಪಕ್ಷ ಕಿಡಿಕಾರಿದೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ನಿಮ್ಮ ಸರ್ಕಾರ ಮಾಡಿಬಿಟ್ಟ ಅಪಚಾರ ಮುಚ್ಚಿಟ್ಟುಕೊಳ್ಳಲು ಒಕ್ಕಲಿಗ ಸಮುದಾಯ ಮತ್ತು ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ಯಾಕೆ ಕೆಸರೆರೆಚುತ್ತಿದ್ದೀರಿ? ಸ್ವಾಮೀಜಿ ಅವರ ಮೇಲೆ ನೀವು ಎಫ್ಐಆರ್ ಹಾಕಿದ್ದು ಈಗ ಸಮುದಾಯದ ಸಿಟ್ಟಿಗೆ ಕಾರಣವಾಗಿದೆ. ಒಕ್ಕಲಿಗರ ಆಕ್ರೋಶಕ್ಕೆ ನೀವು ಗುರಿಯಾಗಿದ್ದೀರಿ. ಬೀಸುವ ದೊಣ್ಣೆಯಿಂದ ಪಾರಾಗಲು ಜೆಡಿಎಸ್ ಬಗ್ಗೆ ಹೊಸ ಹುಳುಕು ಹುಡುಕುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದೆ.

ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಮೇಲೆ ಕೇಸ್‌ ಕಲಾಗಿತ್ತು ಎಂದು ನೀವು ಬಡಬಡಿಸಿದ್ದೀರಿ! ಹಳೆಯ ವಿಷಯ ಕೆದಕಿದ ನಿಮಗೆ ಆ ಪ್ರಕರಣ ಏನು? ಅದು ಮುಂದೇನಾಯಿತು? ಎನ್ನುವ ಮಾಹಿತಿ ಇಲ್ಲವೇ? ಆ ಪ್ರಕರಣಕ್ಕೂ ಜೆಡಿಎಸ್ ಪಕ್ಷಕ್ಕೂ ಸಂಬಂಧ ಏನು? ಮುಂದೆ ಆ ಪ್ರಕರಣ ರದ್ದಾಯಿತು, ನಿಮಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದೆ.

ಚಂದ್ರಶೇಖರ ಸ್ವಾಮೀಜಿ ಅವರ ವಿರುದ್ಧ ನಿಮ್ಮ ಇಡೀ ಕಾಂಗ್ರೆಸ್‌ ಸರ್ಕಾರವೇ ತೊಡೆತಟ್ಟಿ ನಿಂತಿದ್ದು, ಸಚಿವರುಗಳೆಲ್ಲಾ ಅವರ ಮೇಲೆ ರಕ್ಕಸರಂತೆ ಮುಗಿಬಿದ್ದಿದ್ದಾರೆ. ಅವರ ಹೇಳಿಕೆಯ ಬಗ್ಗೆ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ ಮೇಲೆಯೂ ಅವರ ಮೇಲೆ ಸರ್ಕಾರ ಯಾರದೋ ನಿರ್ದಿಷ್ಟ ಚಿತಾವಣೆಗೆ ಒಳಗಾಗಿ ಕಾಲು ಕೆರೆದು ಜಗಳಕ್ಕೆ ನಿಂತಿದೆ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅಪಮಾನಕರವಾಗಿ ವರ್ತಿಸುತ್ತಿದೆ. ಓಲೈಕೆ ರಾಜಕೀಯ, ತುಷ್ಟೀಕರಣದ ಪರಾಕಾಷ್ಠೆ ಇದು. ಒಕ್ಕಲಿಗರಿಗೆ ಇದೆಲ್ಲಾ ಅರ್ಥವಾಗುತ್ತಿದೆ ಎಂದು ಹೇಳಿದೆ.

ಅರ್ಚನ ಎಸ್‌ ಎಸ್

Recent Posts

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

1 hour ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

2 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

3 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

4 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

5 hours ago

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

5 hours ago