ರಾಜ್ಯ

ಕಾಂಗ್ರೆಸ್‌ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ: ಜೆಡಿಎಸ್‌ ಕಿಡಿ

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಜೆಡಿಎಸ್‌ ಪಕ್ಷವು, ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ ಕಿರುಕುಳ ನಡೆದಿದೆ. ಇದು ಅಮಾನವೀಯ ಎಂದು ಹೇಳಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಕಣರೆಯಾಗಿದೆ. ಅಪರಾಧಿಗಳು, ಕಾಮುಕರು, ದರೋಡೆಕೋರರು ಹಾಡಹಗಲೇ ನಿರ್ಭೀತಿಯಿಂದ ದುಷ್ಕೃತ್ಯಗಳನ್ನು ಎಸಗುತ್ತಿದ್ದಾರೆ ಎಂದು ಆರೋಪಿಸಿದೆ.

ಗೃಹ ಇಲಾಖೆ ಹೊಣೆ ಹೊತ್ತಿರುವ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದ ರಾಜ್ಯದ ಜನರ ರಕ್ಷಣೆ ಮರೀಚಿಕೆಯಾಗಿದೆ. ಕರ್ನಾಟಕದಲ್ಲಿ ಪ್ರತಿ ದಿನ ಒಂದಲ್ಲ ಒಂದು ಲೈಂಗಿಕ ಕಿರುಕುಳ, ಅತ್ಯಾಚಾರ, ದರೋಡೆ, ಕೊಲೆ, ಹಲ್ಲೆ, ದೌರ್ಜನ್ಯಗಳಾಗುತ್ತಿದ್ದರೂ ಸರ್ಕಾರ ಗಾಢ ನಿದ್ದೆಯಲ್ಲಿದೆ ಎಂದು ಟೀಕಿಸಿದೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಬರೀ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಕೃಷಿ ಇಲಾಖೆಯಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ, ಅಬಕಾರಿ ವರ್ಗಾವಣೆ ದಂಧೆ, ಕಾಮಗಾರಿಗಳಲ್ಲಿ ಕಮಿಷನ್ ವ್ಯವಹಾರದಲ್ಲಿ ಸಂಪೂರ್ಣ ತೊಡಗಿದ್ದು, ಜಿಲ್ಲೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದೆ.

ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಎಲ್ಲಾ ವಿಧದಲ್ಲಿಯೂ ಸಂಪೂರ್ಣ ವಿಫಲವಾಗಿದೆ. ಹಿಂದಿನ ಸರ್ಕಾರಗಳ ಆಡಳಿತದಲ್ಲಿ ಅತ್ಯಾಚಾರ ಆಗಿಲ್ವಾ ಎನ್ನುವ ಸಿದ್ದರಾಮಯ್ಯ ಅವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಬೇಸರ ವ್ಯಕ್ತಪಡಿಸಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸರ್ಕಾರಿ ಕಾರ್ಯಕ್ರಮಗಳಲ್ಲಿ ಜನರ ಸುರಕ್ಷತೆ: ಹೊಸ ಸುತ್ತೋಲೆ

ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…

1 hour ago

ಲಕ್ಕುಂಡಿ ಬೆನ್ನಲ್ಲೇ ಯಾದಗಿರಿಯಲ್ಲೂ ಉತ್ಖನನ ನಡೆಸಲು ಸಿದ್ಧತೆ

ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…

1 hour ago

ಸಂಸದ ಯದುವೀರ್‌ ಒಡೆಯರ್‌ ಭೇಟಿಯಾದ ಪ್ರತಾಪ್‌ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಸಂಸದ ಯದುವೀರ್‌ ಒಡೆಯರ್‌ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…

2 hours ago

ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ “ಲ್ಯಾಂಡ್ ಲಾರ್ಡ್” ಸಿನಿಮಾ ನೋಡಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…

2 hours ago

ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತ: ಜನಜೀವನ ಅಸ್ತವ್ಯಸ್ತ

ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…

3 hours ago

ಪಾಕಿಸ್ತಾನ ಮದುವೆ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: ಐವರು ಸಾವು

ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…

3 hours ago