ರಾಜ್ಯ

ಮುಡಾ ಅಕ್ರಮಗಳ ʼಸಿದ್ದʼ ರೂವಾರಿ ರಾಮಯ್ಯ: ಜೆಡಿಎಸ್‌ ಕಿಡಿ

ಬೆಂಗಳೂರು: ಮುಡಾ ಅಕ್ರಮಗಳ ಸುಳ್ಳುಗಳ ಸರದಾರ ʼಸಿದ್ದʼ ರೂವಾರಿ ಭ್ರಷ್ಟಾರಾಮಯ್ಯನ ಕಪ್ಪು ಚುಕ್ಕೆಗಳು ನೂರಾರಿವೆ ಎಂದು ಜೆಡಿಎಸ್‌ ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ನಾನು ನಾನು ಎಂದು ಮೆರೆಯುತ್ತಿರುವ ಮುಡಾರಾಮಯ್ಯ ಪ್ರಭಾವಬೀರಿಯೇ ಪತ್ನಿಗೆ 14 ಸೈಟು ಮಂಜೂರು ಮಾಡಿಸಿದ್ದಾರೆ. ಅಲ್ಲದೇ ಮುಡಾದಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ 14 ಸೈಟುಗಳ ಹಂಚಿಕೆಯಲ್ಲಿ ಅಕ್ರಮಗಳ ಸರಮಾಲೆಯೇ ನಡೆದಿದೆ. ಜೊತೆಗೆ ಸುಮಾರು 700 ಕೋಟಿ ರೂಪಾಯಿಯ ಬ್ರಹ್ಮಾಂಡ ಭ್ರಷ್ಟಾಚಾರವಾಗಿದೆ ಎಂದು ವಾಗ್ದಾಳಿ ನಡೆಸಿದೆ.

ಬಹುಕೋಟಿ ಮುಡಾ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ED) ಹಲವು ಸ್ಫೋಟಕ ಮಾಹಿತಿಯನ್ನು ಹೆಕ್ಕಿ ಹೊರ ತೆಗೆದಿದೆ. ಇ.ಡಿ ತನಿಖೆ ಮತ್ತು ಕಾನೂನಿನ ಸುರುಳಿ ಬಿಗಿಯಾಗುತ್ತಿದ್ದಂತೆ ಭ್ರಷ್ಟರಾಮಯ್ಯ ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಸಮಾವೇಶದ ನೆಪದಲ್ಲಿ ನಾಟಕ ಮಾಡಲು ಹೊರಟಿದ್ದಾರೆ. ಹೀಗಾಗಿ ಭ್ರಷ್ಟಾಚಾರದ ಪಿತಾಮಹರಾಗಿರುವ ಸಿದ್ದರಾಮಯ್ಯರವರ ತೆರೆಯದ ಪುಸ್ತಕದಲ್ಲಿ ಮತ್ತೆಷ್ಟು ಉಳುಕುಗಳಿವೆಯೋ ? ಎಂದು ವ್ಯಂಗ್ಯವಾಡಿದೆ.

ಅರ್ಚನ ಎಸ್‌ ಎಸ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago