ಬೆಂಗಳೂರು: ಮುಡಾ ಅಕ್ರಮಗಳ ಸುಳ್ಳುಗಳ ಸರದಾರ ʼಸಿದ್ದʼ ರೂವಾರಿ ಭ್ರಷ್ಟಾರಾಮಯ್ಯನ ಕಪ್ಪು ಚುಕ್ಕೆಗಳು ನೂರಾರಿವೆ ಎಂದು ಜೆಡಿಎಸ್ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಾನು ನಾನು ಎಂದು ಮೆರೆಯುತ್ತಿರುವ ಮುಡಾರಾಮಯ್ಯ ಪ್ರಭಾವಬೀರಿಯೇ ಪತ್ನಿಗೆ 14 ಸೈಟು ಮಂಜೂರು ಮಾಡಿಸಿದ್ದಾರೆ. ಅಲ್ಲದೇ ಮುಡಾದಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ 14 ಸೈಟುಗಳ ಹಂಚಿಕೆಯಲ್ಲಿ ಅಕ್ರಮಗಳ ಸರಮಾಲೆಯೇ ನಡೆದಿದೆ. ಜೊತೆಗೆ ಸುಮಾರು 700 ಕೋಟಿ ರೂಪಾಯಿಯ ಬ್ರಹ್ಮಾಂಡ ಭ್ರಷ್ಟಾಚಾರವಾಗಿದೆ ಎಂದು ವಾಗ್ದಾಳಿ ನಡೆಸಿದೆ.
ಬಹುಕೋಟಿ ಮುಡಾ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ED) ಹಲವು ಸ್ಫೋಟಕ ಮಾಹಿತಿಯನ್ನು ಹೆಕ್ಕಿ ಹೊರ ತೆಗೆದಿದೆ. ಇ.ಡಿ ತನಿಖೆ ಮತ್ತು ಕಾನೂನಿನ ಸುರುಳಿ ಬಿಗಿಯಾಗುತ್ತಿದ್ದಂತೆ ಭ್ರಷ್ಟರಾಮಯ್ಯ ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಸಮಾವೇಶದ ನೆಪದಲ್ಲಿ ನಾಟಕ ಮಾಡಲು ಹೊರಟಿದ್ದಾರೆ. ಹೀಗಾಗಿ ಭ್ರಷ್ಟಾಚಾರದ ಪಿತಾಮಹರಾಗಿರುವ ಸಿದ್ದರಾಮಯ್ಯರವರ ತೆರೆಯದ ಪುಸ್ತಕದಲ್ಲಿ ಮತ್ತೆಷ್ಟು ಉಳುಕುಗಳಿವೆಯೋ ? ಎಂದು ವ್ಯಂಗ್ಯವಾಡಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…