ಬೆಂಗಳೂರು : ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ ನೀಡಿರುವ ವಿಚಾರ ಸುದ್ದಿಯಾಗದಂತೆ ತಡೆಯಲು ಸರ್ಕಾರದಿಂದ ಯತ್ನಿಸಲಾಗಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.
ಈ ವಿಚಾರವಾಗಿ ಎಕ್ಸ್ ನಲ್ಲಿ ಜೆಡಿಎಸ್ ಅಭಿಪ್ರಾಯ ಹಂಚಿಕೊಂಡಿದ್ದು, ದುರಂತ ನಡೆದು ಇಷ್ಟು ದಿನವಾದರೂ ಶಿರೂರಿಗೆ ನೀವಾಗಲಿ, ನಿಮ್ಮ ಸರ್ಕಾರದ ಯಾವುದೇ ಸಚಿವರಾಗಲಿ ಸ್ಥಳಕ್ಕೆ ಭೇಟಿ ನೀಡಿಲ್ಲ. ಸಂತ್ರಸ್ತರ ಸಂಕಷ್ಟ ಆಲಿಸಿಲ್ಲ. ಆದರೆ ಅವರು ಎಚ್ ಡಿಕೆ ಅವರು ಶಿರೂರು ಗ್ರಾಮಕ್ಕೆ ಭೇಟಿ ನೀಡುವ ವೇಳೆಯೂ ನಿಮ್ಮ ಸರ್ಕಾರ ಈ ಸೇಡಿನ ರಾಜಕೀಯ ಥರವೇ..? ಇದು ಸಿದ್ದರಾಮಯ್ಯರ ಕೀಳುಮಟ್ಟದ ರಾಜಕೀಯ ಎಂದು ಆಕ್ಷೇಪ ವ್ಯಕ್ತಪಡಿಸಿದೆ.
ಅಲ್ಲದೆ ಏನೇ ಇದ್ದರೂ ಎಚ್ ಡಿಕೆ ಪ್ರಚಾರಕ್ಕೆ ಶಿರೂರಿಗೆ ಭೇಟಿ ನೀಡುತ್ತಿಲ್ಲ. ಜಿಲ್ಲಾಡಳಿತವನ್ನ ಬಳಸಿ ಮಾಧ್ಯಮದವರನ್ನು ತಡೆದ ಮಾತ್ರಕ್ಕೆ ಕುಮಾರಸ್ವಾಮಿ ಅವರ ಭೇಟಿ ನಿಲ್ಲಿಸಲು ಸಾಧ್ಯವೇ..? ಸಂತ್ರಸ್ಥರ ಕಷ್ಟ ಆಲಿಸುವುದನ್ನ ತಡೆಯಲು ಸಾಧ್ಯವೇ ಎಂದು ಸಿಎಂ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…