ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2025-26ನೇ ಸಾಲಿನ ಬಜೆಟ್ ಸಾಲ ಮಾಡಿ ಜನರ ಮೂಗಿಗೆ ತುಪ್ಪ ಸವರಿದ ಹಾಗೇ ಇದೆ ಎಂದು ಜೆಡಿಎಸ್ ವ್ಯಂಗ್ಯ ಮಾಡಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಸರಣಿ ಪೋಸ್ಟ್ ಮಾಡಿರುವ ಜೆಡಿಎಸ್ ಸಾಲ ಮಾಡಿ ಜನರ ಮೂಗಿಗೆ ತುಪ್ಪ ಸವರಿದ ಸಿದ್ದರಾಮಯ್ಯ ಅವರು 4.09 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ್ದಾರೆ. ಅದರಲ್ಲಿ 1.16 ಲಕ್ಷ ಕೋಟಿ ರೂ. ಹೊಸದಾಗಿ ಸಾಲ ಬೇಡುತ್ತಿದ್ದಾರೆ. ಹಾಗಾಗಿ ಅವರು ಸಾಲರಾಮಯ್ಯ ಆಗಿದ್ದಾರೆ ಎಂದು ಲೇವಡಿ ಮಾಡಿದೆ.
2025-26ರ ಅಂತ್ಯಕ್ಕೆ ಕರ್ನಾಟಕ ರಾಜ್ಯದ ಒಟ್ಟು ಸಾಲ 7,64,655 ಕೋಟಿ ರೂಪಾಯಿಗಳು. ಅದರಲ್ಲಿ ಸರ್ಕಾರದ ಖರ್ಚು, ಸರ್ಕಾರಿ ನೌಕರರ ಸಂಬಳ, ಪಿಂಚಣಿಗೆ ಸರ್ಕಾರದ ಬಳಿ ಆದಾಯವಿಲ್ಲದೇ, ಖರ್ಚು ನಿಭಾಯಿಸಲು 19,262 ಕೋಟಿ ರೂ. ಸಾಲ ಪಡೆಯಲಾಗುತ್ತಿದೆ. ಅಲ್ಲದೇ
ಬಜೆಟ್ನ ಅಂದಾಜು ಶೇ.30% ಹಣವನ್ನು ಸಾಲ ಮಾಡಿ ರಾಜ್ಯದ ಜನರ ಮೂಗಿಗೆ ತುಪ್ಪ ಸವರಲು ಹೊರಟಿರುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಿವಾಳಿ ರಾಜ್ಯ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದೆ.
ಕನ್ನಡದ್ರೋಹಿ ಸಿದ್ದರಾಮಯ್ಯ
ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ ಎಂದು ಮರು ನಾಮಕರಣ ಮಾಡುವ ಅವಶ್ಯಕತೆ ಏನಿತ್ತು ಸಿದ್ದರಾಮಯ್ಯ ಅವರೇ ? ಬೆಂಗಳೂರು ನಗರ ವಿಶ್ವವಿದ್ಯಾನಿಲಯಕ್ಕೂ ಮನಮೋಹನ್ ಸಿಂಗ್ ಅವರಿಗೂ ಏನು ಸಂಬಂಧ ? ಇದು ಕಾಂಗ್ರೆಸ್ ಗುಲಾಮಗಿರಿ ಅಲ್ಲವೇ?, ಕರ್ನಾಟಕದಲ್ಲಿ ಹುಟ್ಟಿದ ಸಾವಿರಾರು ಕನ್ನಡಿಗ ಮಹಾನ್ ಸಾಧಕರು ಇದ್ದರೂ ಅವರು ಯಾರು ಕಾಂಗ್ರೆಸ್ ಸರ್ಕಾರದ ಕಣ್ಣಿಗೆ ಬೀಳಲಿಲ್ಲವೇ ಕನ್ನಡ ದ್ರೋಹಿ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದೆ.
ತುಷ್ಟೀಕರಣ ರಾಜಕೀಯದ ಪಿತಾಮಹ ಸಿದ್ದರಾಮಯ್ಯ
ಮತ ಬ್ಯಾಂಕ್ ರಾಜಕಾರಣಕ್ಕೆ ಒಂದು ಸಮುದಾಯದ ಓಲೈಕೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಬಜೆಟ್ನಲ್ಲಿ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಿಸಿದೆ. ಅಲ್ಲದೇ ತುಷ್ಟೀಕರಣ ರಾಜಕೀಯದ ಪಿತಾಮಹ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ನೀಡಿರುವುದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧ ಅಲ್ಲವೇ ಎಂದು ಕಿಡಿಕಾರಿದೆ.
ಬೆಂಗಳೂರು : ಸಂವಿಧಾನವನ್ನ ದುರ್ಬಲಗೊಳಿಸುವ ಪ್ರಯತ್ನ ನಡೆಸುವುದು ವಿಷ ಉಣಿಸುವ ಸಂಚು. ಸಂವಿಧಾನವನ್ನ ನಾವು ರಕ್ಷಿಸಿದ್ರೆ ಸಂವಿಧಾನ ನಮ್ಮನ್ನ ರಕ್ಷಿಸುತ್ತದೆ.…
ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…