ಬೆಂಗಳೂರು: ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬೆಲೆ ಏರಿಕೆ ಮಾಡುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿದ್ದು, ನಂದಿನಿ ಹಾಲಿನ ದರ 4ರೂ. ಹೆಚ್ಚಿಸಿ ರಾಜ್ಯದ ಜನರಿಗೆ ಯುಗಾದಿಗೆ ಉಡುಗೊರೆ ನೀಡಿದೆ. ಎಂದು ಜೆಡಿಎಸ್ ವ್ಯಂಗ್ಯ ಮಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ, ಬೆಲೆ ಏರಿಸುವುದನ್ನೇ ನಿತ್ಯ ಕಾಯಕವಾಗಿಸಿಕೊಂಡು ಜನಸಾಮಾನ್ಯರನ್ನು ದಿನೇ ದಿನೇ ಸುಲಿಗೆ ಮಾಡುತ್ತಿದೆ. ಅಲ್ಲದೇ ನಂದಿನಿ ಹಾಲಿನ ದರ 4 ರೂ. ಹೆಚ್ಚಿಸಿ ರಾಜ್ಯದ ಜನರಿಗೆ ಯುಗಾದಿಗೆ ಉಡುಗೊರೆ ನೀಡಿದೆ ಕಿಡಿಕಾರಿದೆ.
2 ವರ್ಷದಲ್ಲಿ 3 ಬಾರಿ ಹಾಲಿನ ದರ ಏರಿಕೆ; ಲೀ. 9 ಹೆಚ್ಚಳವಾಗಿದೆ. ಮೊದಲು 2023ರ ಆಗಸ್ಟ್ನಲ್ಲಿ ಹಾಲಿನ ದರ ಲೀ. 3 ರೂ. 2024ರ ಜೂನ್ನಲ್ಲಿ ಹಾಲಿನ ದರ ಲೀ. 2.10 ರೂ. ಹೆಚ್ಚಳ ಮಾಡಿತ್ತು. ಅಂತೆಯೇ ಇದೀಗ 2025ರ ಮಾರ್ಚ್ನಲ್ಲಿ ಹಾಲಿನ ದರ ಲೀ. 4 ಏರಿಕೆ ಮಾಡಿದೆ. ಹೀಗಾಗಿ ವಚನ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಹಾಲು ಉತ್ಪಾದಕರಿಗೆ ಹಾಲಿನ ದರ ಕಡಿತಗೊಳಿಸಿದೆ, ಜೊತೆಗೆ ಹಾಲಿನ ಪ್ರೋತ್ಸಾಹ ಧನವನ್ನು ರೈತರಿಗೆ ಸರಿಯಾಗಿ ಕೊಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದೆ.
ಸಿಎಂ ಸಿದ್ದರಾಮಯ್ಯ ಸರ್ಕಾರ ಕಳೆದ 2 ವರ್ಷದಲ್ಲಿ 3ನೇ ಬಾರಿಗೆ ಹಾಲಿನ ಬೆಲೆ ಏರಿಸಿ ಸಂಗ್ರಹಿಸುತ್ತಿರುವ ಸಾವಿರಾರು ಕೋಟಿ ಹಣ ಎಲ್ಲಿಗೆ ಹೋಗುತ್ತಿದೆ, ಯಾರ ಜೇಬು ಸೇರುತ್ತಿದೆ ? ಎಂದು ಪ್ರಶ್ನಿಸಿದೆ.
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…