ಬೆಂಗಳೂರು: ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬೆಲೆ ಏರಿಕೆ ಮಾಡುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿದ್ದು, ನಂದಿನಿ ಹಾಲಿನ ದರ 4ರೂ. ಹೆಚ್ಚಿಸಿ ರಾಜ್ಯದ ಜನರಿಗೆ ಯುಗಾದಿಗೆ ಉಡುಗೊರೆ ನೀಡಿದೆ. ಎಂದು ಜೆಡಿಎಸ್ ವ್ಯಂಗ್ಯ ಮಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರ, ಬೆಲೆ ಏರಿಸುವುದನ್ನೇ ನಿತ್ಯ ಕಾಯಕವಾಗಿಸಿಕೊಂಡು ಜನಸಾಮಾನ್ಯರನ್ನು ದಿನೇ ದಿನೇ ಸುಲಿಗೆ ಮಾಡುತ್ತಿದೆ. ಅಲ್ಲದೇ ನಂದಿನಿ ಹಾಲಿನ ದರ 4 ರೂ. ಹೆಚ್ಚಿಸಿ ರಾಜ್ಯದ ಜನರಿಗೆ ಯುಗಾದಿಗೆ ಉಡುಗೊರೆ ನೀಡಿದೆ ಕಿಡಿಕಾರಿದೆ.
2 ವರ್ಷದಲ್ಲಿ 3 ಬಾರಿ ಹಾಲಿನ ದರ ಏರಿಕೆ; ಲೀ. 9 ಹೆಚ್ಚಳವಾಗಿದೆ. ಮೊದಲು 2023ರ ಆಗಸ್ಟ್ನಲ್ಲಿ ಹಾಲಿನ ದರ ಲೀ. 3 ರೂ. 2024ರ ಜೂನ್ನಲ್ಲಿ ಹಾಲಿನ ದರ ಲೀ. 2.10 ರೂ. ಹೆಚ್ಚಳ ಮಾಡಿತ್ತು. ಅಂತೆಯೇ ಇದೀಗ 2025ರ ಮಾರ್ಚ್ನಲ್ಲಿ ಹಾಲಿನ ದರ ಲೀ. 4 ಏರಿಕೆ ಮಾಡಿದೆ. ಹೀಗಾಗಿ ವಚನ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಹಾಲು ಉತ್ಪಾದಕರಿಗೆ ಹಾಲಿನ ದರ ಕಡಿತಗೊಳಿಸಿದೆ, ಜೊತೆಗೆ ಹಾಲಿನ ಪ್ರೋತ್ಸಾಹ ಧನವನ್ನು ರೈತರಿಗೆ ಸರಿಯಾಗಿ ಕೊಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದೆ.
ಸಿಎಂ ಸಿದ್ದರಾಮಯ್ಯ ಸರ್ಕಾರ ಕಳೆದ 2 ವರ್ಷದಲ್ಲಿ 3ನೇ ಬಾರಿಗೆ ಹಾಲಿನ ಬೆಲೆ ಏರಿಸಿ ಸಂಗ್ರಹಿಸುತ್ತಿರುವ ಸಾವಿರಾರು ಕೋಟಿ ಹಣ ಎಲ್ಲಿಗೆ ಹೋಗುತ್ತಿದೆ, ಯಾರ ಜೇಬು ಸೇರುತ್ತಿದೆ ? ಎಂದು ಪ್ರಶ್ನಿಸಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…