ರಾಜ್ಯ

ಹಾಲಿನ ದರ ಏರಿಕೆ| ಕಾಂಗ್ರೆಸ್‌ ಸರ್ಕಾರ, ನಂದಿನ ಹಾಲಿನ ದರ 4 ರೂ. ಹೆಚ್ಚಿಸಿ ರಾಜ್ಯದ ಜನರಿಗೆ ಯುಗಾದಿಗೆ ಉಡುಗೊರೆ ನೀಡಿದೆ: ಜೆಡಿಎಸ್‌

ಬೆಂಗಳೂರು: ಅಭಿವೃದ್ಧಿ ಶೂನ್ಯ ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಬೆಲೆ ಏರಿಕೆ ಮಾಡುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿದ್ದು, ನಂದಿನಿ ಹಾಲಿನ ದರ 4ರೂ. ಹೆಚ್ಚಿಸಿ ರಾಜ್ಯದ ಜನರಿಗೆ ಯುಗಾದಿಗೆ ಉಡುಗೊರೆ ನೀಡಿದೆ. ಎಂದು ಜೆಡಿಎಸ್‌ ವ್ಯಂಗ್ಯ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಅಭಿವೃದ್ಧಿ ಶೂನ್ಯ ಕಾಂಗ್ರೆಸ್‌ ಸರ್ಕಾರ, ಬೆಲೆ ಏರಿಸುವುದನ್ನೇ ನಿತ್ಯ ಕಾಯಕವಾಗಿಸಿಕೊಂಡು ಜನಸಾಮಾನ್ಯರನ್ನು ದಿನೇ ದಿನೇ ಸುಲಿಗೆ ಮಾಡುತ್ತಿದೆ. ಅಲ್ಲದೇ ನಂದಿನಿ ಹಾಲಿನ ದರ 4 ರೂ. ಹೆಚ್ಚಿಸಿ ರಾಜ್ಯದ ಜನರಿಗೆ ಯುಗಾದಿಗೆ ಉಡುಗೊರೆ ನೀಡಿದೆ ಕಿಡಿಕಾರಿದೆ.

2 ವರ್ಷದಲ್ಲಿ 3 ಬಾರಿ ಹಾಲಿನ ದರ ಏರಿಕೆ; ಲೀ. 9 ಹೆಚ್ಚಳವಾಗಿದೆ. ಮೊದಲು 2023ರ ಆಗಸ್ಟ್‌ನಲ್ಲಿ ಹಾಲಿನ ದರ ಲೀ. 3 ರೂ. 2024ರ ಜೂನ್‌ನಲ್ಲಿ ಹಾಲಿನ ದರ ಲೀ. 2.10 ರೂ. ಹೆಚ್ಚಳ ಮಾಡಿತ್ತು. ಅಂತೆಯೇ ಇದೀಗ 2025ರ ಮಾರ್ಚ್‌ನಲ್ಲಿ ಹಾಲಿನ ದರ ಲೀ. 4 ಏರಿಕೆ ಮಾಡಿದೆ. ಹೀಗಾಗಿ ವಚನ ಭ್ರಷ್ಟ ಕಾಂಗ್ರೆಸ್‌ ಸರ್ಕಾರ, ಹಾಲು ಉತ್ಪಾದಕರಿಗೆ ಹಾಲಿನ ದರ ಕಡಿತಗೊಳಿಸಿದೆ, ಜೊತೆಗೆ ಹಾಲಿನ ಪ್ರೋತ್ಸಾಹ ಧನವನ್ನು ರೈತರಿಗೆ ಸರಿಯಾಗಿ ಕೊಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದೆ.

ಸಿಎಂ ಸಿದ್ದರಾಮಯ್ಯ ಸರ್ಕಾರ ಕಳೆದ 2 ವರ್ಷದಲ್ಲಿ 3ನೇ ಬಾರಿಗೆ ಹಾಲಿನ ಬೆಲೆ ಏರಿಸಿ ಸಂಗ್ರಹಿಸುತ್ತಿರುವ ಸಾವಿರಾರು ಕೋಟಿ ಹಣ ಎಲ್ಲಿಗೆ ಹೋಗುತ್ತಿದೆ, ಯಾರ ಜೇಬು ಸೇರುತ್ತಿದೆ ? ಎಂದು ಪ್ರಶ್ನಿಸಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

8 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

8 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

8 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

8 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

8 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago