ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ಗೆ ಸಿದ್ಧಾಂತವಿಲ್ಲ. ಅವರದೊಂದು ನೀತಿ ಇಲ್ಲ. ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದರು.
ಇನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಡಿಕೆಶಿ ಅವರು, ಮಿಸ್ಟರ್ ಕುಮಾರಸ್ವಾಮಿ ರಾಜಕೀಯದಲ್ಲಿ ನಿಮಗಿಂತ ನನಗೆ ಅನುಭವ ಹೆಚ್ಚಿದೆ. ನಾನು ಸಿಎಂ ಆಗದೇ ಇರಬಹುದು. ಸುದೀರ್ಘ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಹೀಗಾಗಿ ಆಡಳಿತದಲ್ಲಿ ಕುಮಾರಸ್ವಾಮಿಗಿಂತ ನನಗೆ ಹೆಚ್ಚು ಅನುಭವವಿದೆ ಎಂದು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…