ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ ಜೆಡಿಎಸ್ಗೆ ಮೂರು ಸ್ಥಾನಗಳನ್ನು ಬಿಟ್ಟುಕೊಡಲಾಗಿದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಹೇಳಿದ್ದಾರೆ.
ಬಿಜೆಪಿ ಹೈಕಮಾಂಡ್ ಜೆಡಿಎಸ್ ಒತ್ತಾಯಕ್ಕೆ ಮಣಿದಿದ್ದು, ಮಂಡ್ಯ, ಹಾಸನ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಮೂರು ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿರುವುದಾಗಿ ಘೋಷಣೆ ಮಾಡಿದ್ದಾರೆ.
ಇತ್ತೀಚೆಗೆ ಮೈತ್ರಿ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ಮಧ್ಯೆ ಹಲವಾರು ಬಿನ್ನಾಭಿಪ್ರಾಯ ಏರ್ಪಟ್ಟಿತ್ತು. ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ಬಿಜೆಪಿ ನಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಮತ್ತು ಜೆಡಿಎಸ್ ನಿಂದ ಮಂಡ್ಯ ಕಣದಲ್ಲಿ ಅಭ್ಯರ್ಥಿ ನಿಲ್ಲಿಸುವುದಾಗಿ ಈ ಹಿಂದೆ ಜೆಡಿಎಸ್ ಹೇಳಿತ್ತು. ಪ್ರಧಾನಿ ಮೋದಿ ನೇತೃತ್ವದಲ್ಲಿ ಮಾಡುವ ಸಮಾವೇಶಕ್ಕೆ ಆಯಾ ಪ್ರದೇಶದ ಜೆಡಿಎಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಟಿಕೆಟ್ ಹಂಚಿಕೆ ವೇಳೆಯೂ ಜೆಡಿಎಸ್ ಜತೆ ಸಮಾಲೋಚನೆ ನಡೆಸುತ್ತಿಲ್ಲ ಎಂದು ಜೆಡಿಎಸ್ ನಾಯಕರೂ ಅಸಮಾಧಾನ ವ್ಯಕ್ತಪಡಿಸಿದ್ದರು. ಸದ್ಯ ಈ ಎಲ್ಲಾ ಮನಸ್ತಾಪಗಳಿಗೂ ಈಗ ತೆರೆಬಿದ್ದಿದೆ.
ಈ ನಡುವೆ ಸುಮಲತಾ ಟಿಕೆಟ್ ನೀಡುವ ಕುರಿತು ಮಾತನಾಡಿದ ರಾಧಾ ಮೋಹನ್ ದಾಸ್, ಸುಮಲತಾ ಅವರ ರಾಜಕೀಯ ಭವಿಷ್ಯ ಉತ್ತಮವಾಗಿರಲಿದೆ ಎಂದು ಹೇಳಿದ್ದಾರೆ. ಜೆಡಿಎಸ್ಗೆ ಮಂಡ್ಯ ಟಿಕೆಟ್ ಸಿಕ್ಕರೇ ಸುಮಲತಾ ನಡೆಯೇನು ಎಂಬುದು ಸದ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…