ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ ಜೆಡಿಎಸ್ಗೆ ಮೂರು ಸ್ಥಾನಗಳನ್ನು ಬಿಟ್ಟುಕೊಡಲಾಗಿದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಹೇಳಿದ್ದಾರೆ.
ಬಿಜೆಪಿ ಹೈಕಮಾಂಡ್ ಜೆಡಿಎಸ್ ಒತ್ತಾಯಕ್ಕೆ ಮಣಿದಿದ್ದು, ಮಂಡ್ಯ, ಹಾಸನ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಮೂರು ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿರುವುದಾಗಿ ಘೋಷಣೆ ಮಾಡಿದ್ದಾರೆ.
ಇತ್ತೀಚೆಗೆ ಮೈತ್ರಿ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ಮಧ್ಯೆ ಹಲವಾರು ಬಿನ್ನಾಭಿಪ್ರಾಯ ಏರ್ಪಟ್ಟಿತ್ತು. ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ಬಿಜೆಪಿ ನಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಮತ್ತು ಜೆಡಿಎಸ್ ನಿಂದ ಮಂಡ್ಯ ಕಣದಲ್ಲಿ ಅಭ್ಯರ್ಥಿ ನಿಲ್ಲಿಸುವುದಾಗಿ ಈ ಹಿಂದೆ ಜೆಡಿಎಸ್ ಹೇಳಿತ್ತು. ಪ್ರಧಾನಿ ಮೋದಿ ನೇತೃತ್ವದಲ್ಲಿ ಮಾಡುವ ಸಮಾವೇಶಕ್ಕೆ ಆಯಾ ಪ್ರದೇಶದ ಜೆಡಿಎಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಟಿಕೆಟ್ ಹಂಚಿಕೆ ವೇಳೆಯೂ ಜೆಡಿಎಸ್ ಜತೆ ಸಮಾಲೋಚನೆ ನಡೆಸುತ್ತಿಲ್ಲ ಎಂದು ಜೆಡಿಎಸ್ ನಾಯಕರೂ ಅಸಮಾಧಾನ ವ್ಯಕ್ತಪಡಿಸಿದ್ದರು. ಸದ್ಯ ಈ ಎಲ್ಲಾ ಮನಸ್ತಾಪಗಳಿಗೂ ಈಗ ತೆರೆಬಿದ್ದಿದೆ.
ಈ ನಡುವೆ ಸುಮಲತಾ ಟಿಕೆಟ್ ನೀಡುವ ಕುರಿತು ಮಾತನಾಡಿದ ರಾಧಾ ಮೋಹನ್ ದಾಸ್, ಸುಮಲತಾ ಅವರ ರಾಜಕೀಯ ಭವಿಷ್ಯ ಉತ್ತಮವಾಗಿರಲಿದೆ ಎಂದು ಹೇಳಿದ್ದಾರೆ. ಜೆಡಿಎಸ್ಗೆ ಮಂಡ್ಯ ಟಿಕೆಟ್ ಸಿಕ್ಕರೇ ಸುಮಲತಾ ನಡೆಯೇನು ಎಂಬುದು ಸದ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…