ರಾಜ್ಯ

ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಜಾ.ದಳ ಸಜ್ಜು

ಬೆಂಗಳೂರು : ಹಾಸನದಲ್ಲಿ ಜಾ.ದಳ ಪಕ್ಷದ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಜಾ.ದಳ ಮುಂದಾಗಿದೆ. ಜ.24ರಂದು ಬೃಹತ್ ಸಮಾವೇಶ ನಡೆಸುವ ಮೂಲಕ ಜಾ.ದಳದ ನೆಲೆ ಭದ್ರವಾಗಿದೆ ಎಂಬುದನ್ನು ಸಾಬೀತುಪಡಿಸಲು ಉದ್ದೇಶಿಸಿದ್ದು, ಸಮಾವೇಶದ ಪೂರ್ವ ಸಿದ್ಧತೆಗಳು ಬರದಿಂದ ಸಾಗಿವೆ.

ಸುಮಾರು 2 ಲಕ್ಷದಷ್ಟು ಜನರನ್ನು ಸೇರಿಸಿ ಸಮಾವೇಶ ಮಾಡಬೇಕು ಎಂಬುದು ಜಾ.ದಳ ವರಿಷ್ಠರ ನಿರ್ದೇಶನವಾಗಿದೆ. ಹೀಗಾಗಿ ಹಾಸನ ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು, ಮುಖಂಡರು ಸಮಾವೇಶದ ಸಿದ್ಧತೆಯಲ್ಲಿ ತೊಡಗಿದ್ದಾರೆ.

ತಾಲ್ಲೂಕು ಹಾಗೂ ವಿಧಾನಸಭೆ ಕ್ಷೇತ್ರವಾರು ಸಭೆಗಳನ್ನು ನಡೆಸುವ ಮೂಲಕ ಸಮಾವೇಶದ ರೂಪರೇಷೆ ಹಾಗೂ ಪೂರ್ವ ಸಿದ್ಧತೆಗಳ ಸಭೆ ನಡೆಸಿ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ಜಾ.ದಳ ಮೂಲಗಳು ತಿಳಿಸಿವೆ.

ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಹಾಸನದಲ್ಲಿ ಎರಡು ಸಮಾವೇಶ ನಡೆಸುವ ಮೂಲಕ ಪಕ್ಷ ಬಲವರ್ಧನೆಗ ಮುಂದಾಗಿದೆ. ಇದರಿಂದ ಜಾ.ದಳ ಭದ್ರಕೋಟೆಗೆ ಕಾಂಗ್ರೆಸ್ ನುಗ್ಗುತ್ತಿದೆ ಎಂದು ಭಾವಿಸಿವ ಜಾ.ದಳ ನಾಯಕರು, ಕಾಂಗ್ರೆಸ್‌ಗಿಂತ ಜಾ.ದಳ ನೆಲೆ ಗಟ್ಟಿಯಾಗಿದೆ ಎಂಬುದನ್ನು ಬಹಿಂಗವಾಗಿ ತೋರಿಸುವ ಉದ್ದೇಶದಿಂದ ಸಮಾವೇಶ ನಡೆಸಲಾಗುತ್ತಿದೆ.

ಈಗಾಗಲೇ ಜಾ.ದಳ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ಸಮಾವೇಶ ಕುರಿತು ಪಕ್ಷದ ಎರಡು -ಮೂರು ಸಭೆಗಳನ್ನು ನಡೆಸಿ ಸಲಹೆ-ಸೂಚನೆ ನೀಡಲಾಗಿದೆ. ಜಾ.ದಳ ನೆಲೆ ಕಳೆದುಕೊಳ್ಳುತ್ತಿದೆ ಎಂದು ಆರೋಪಿಸುವ ಕಾಂಗ್ರೆಸ್‌ಗೆ ಸಮಾವೇಶದ ಮೂಲಕವೇ ತಿರುಗೇಟು ನೀಡಲು ತೀರ್ಮಾನಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

5 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

6 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

7 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

8 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

9 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

9 hours ago