ಬೆಂಗಳೂರು : ಹಾಸನದಲ್ಲಿ ಜಾ.ದಳ ಪಕ್ಷದ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಜಾ.ದಳ ಮುಂದಾಗಿದೆ. ಜ.24ರಂದು ಬೃಹತ್ ಸಮಾವೇಶ ನಡೆಸುವ ಮೂಲಕ ಜಾ.ದಳದ ನೆಲೆ ಭದ್ರವಾಗಿದೆ ಎಂಬುದನ್ನು ಸಾಬೀತುಪಡಿಸಲು ಉದ್ದೇಶಿಸಿದ್ದು, ಸಮಾವೇಶದ ಪೂರ್ವ ಸಿದ್ಧತೆಗಳು ಬರದಿಂದ ಸಾಗಿವೆ.
ಸುಮಾರು 2 ಲಕ್ಷದಷ್ಟು ಜನರನ್ನು ಸೇರಿಸಿ ಸಮಾವೇಶ ಮಾಡಬೇಕು ಎಂಬುದು ಜಾ.ದಳ ವರಿಷ್ಠರ ನಿರ್ದೇಶನವಾಗಿದೆ. ಹೀಗಾಗಿ ಹಾಸನ ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು, ಮುಖಂಡರು ಸಮಾವೇಶದ ಸಿದ್ಧತೆಯಲ್ಲಿ ತೊಡಗಿದ್ದಾರೆ.
ತಾಲ್ಲೂಕು ಹಾಗೂ ವಿಧಾನಸಭೆ ಕ್ಷೇತ್ರವಾರು ಸಭೆಗಳನ್ನು ನಡೆಸುವ ಮೂಲಕ ಸಮಾವೇಶದ ರೂಪರೇಷೆ ಹಾಗೂ ಪೂರ್ವ ಸಿದ್ಧತೆಗಳ ಸಭೆ ನಡೆಸಿ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ಜಾ.ದಳ ಮೂಲಗಳು ತಿಳಿಸಿವೆ.
ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಹಾಸನದಲ್ಲಿ ಎರಡು ಸಮಾವೇಶ ನಡೆಸುವ ಮೂಲಕ ಪಕ್ಷ ಬಲವರ್ಧನೆಗ ಮುಂದಾಗಿದೆ. ಇದರಿಂದ ಜಾ.ದಳ ಭದ್ರಕೋಟೆಗೆ ಕಾಂಗ್ರೆಸ್ ನುಗ್ಗುತ್ತಿದೆ ಎಂದು ಭಾವಿಸಿವ ಜಾ.ದಳ ನಾಯಕರು, ಕಾಂಗ್ರೆಸ್ಗಿಂತ ಜಾ.ದಳ ನೆಲೆ ಗಟ್ಟಿಯಾಗಿದೆ ಎಂಬುದನ್ನು ಬಹಿಂಗವಾಗಿ ತೋರಿಸುವ ಉದ್ದೇಶದಿಂದ ಸಮಾವೇಶ ನಡೆಸಲಾಗುತ್ತಿದೆ.
ಈಗಾಗಲೇ ಜಾ.ದಳ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ಸಮಾವೇಶ ಕುರಿತು ಪಕ್ಷದ ಎರಡು -ಮೂರು ಸಭೆಗಳನ್ನು ನಡೆಸಿ ಸಲಹೆ-ಸೂಚನೆ ನೀಡಲಾಗಿದೆ. ಜಾ.ದಳ ನೆಲೆ ಕಳೆದುಕೊಳ್ಳುತ್ತಿದೆ ಎಂದು ಆರೋಪಿಸುವ ಕಾಂಗ್ರೆಸ್ಗೆ ಸಮಾವೇಶದ ಮೂಲಕವೇ ತಿರುಗೇಟು ನೀಡಲು ತೀರ್ಮಾನಿಸಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…