ಬೆಂಗಳೂರು : ಹಾಸನದಲ್ಲಿ ಜಾ.ದಳ ಪಕ್ಷದ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಜಾ.ದಳ ಮುಂದಾಗಿದೆ. ಜ.24ರಂದು ಬೃಹತ್ ಸಮಾವೇಶ ನಡೆಸುವ ಮೂಲಕ ಜಾ.ದಳದ ನೆಲೆ ಭದ್ರವಾಗಿದೆ ಎಂಬುದನ್ನು ಸಾಬೀತುಪಡಿಸಲು ಉದ್ದೇಶಿಸಿದ್ದು, ಸಮಾವೇಶದ ಪೂರ್ವ ಸಿದ್ಧತೆಗಳು ಬರದಿಂದ ಸಾಗಿವೆ.
ಸುಮಾರು 2 ಲಕ್ಷದಷ್ಟು ಜನರನ್ನು ಸೇರಿಸಿ ಸಮಾವೇಶ ಮಾಡಬೇಕು ಎಂಬುದು ಜಾ.ದಳ ವರಿಷ್ಠರ ನಿರ್ದೇಶನವಾಗಿದೆ. ಹೀಗಾಗಿ ಹಾಸನ ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು, ಮುಖಂಡರು ಸಮಾವೇಶದ ಸಿದ್ಧತೆಯಲ್ಲಿ ತೊಡಗಿದ್ದಾರೆ.
ತಾಲ್ಲೂಕು ಹಾಗೂ ವಿಧಾನಸಭೆ ಕ್ಷೇತ್ರವಾರು ಸಭೆಗಳನ್ನು ನಡೆಸುವ ಮೂಲಕ ಸಮಾವೇಶದ ರೂಪರೇಷೆ ಹಾಗೂ ಪೂರ್ವ ಸಿದ್ಧತೆಗಳ ಸಭೆ ನಡೆಸಿ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ಜಾ.ದಳ ಮೂಲಗಳು ತಿಳಿಸಿವೆ.
ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಹಾಸನದಲ್ಲಿ ಎರಡು ಸಮಾವೇಶ ನಡೆಸುವ ಮೂಲಕ ಪಕ್ಷ ಬಲವರ್ಧನೆಗ ಮುಂದಾಗಿದೆ. ಇದರಿಂದ ಜಾ.ದಳ ಭದ್ರಕೋಟೆಗೆ ಕಾಂಗ್ರೆಸ್ ನುಗ್ಗುತ್ತಿದೆ ಎಂದು ಭಾವಿಸಿವ ಜಾ.ದಳ ನಾಯಕರು, ಕಾಂಗ್ರೆಸ್ಗಿಂತ ಜಾ.ದಳ ನೆಲೆ ಗಟ್ಟಿಯಾಗಿದೆ ಎಂಬುದನ್ನು ಬಹಿಂಗವಾಗಿ ತೋರಿಸುವ ಉದ್ದೇಶದಿಂದ ಸಮಾವೇಶ ನಡೆಸಲಾಗುತ್ತಿದೆ.
ಈಗಾಗಲೇ ಜಾ.ದಳ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ಸಮಾವೇಶ ಕುರಿತು ಪಕ್ಷದ ಎರಡು -ಮೂರು ಸಭೆಗಳನ್ನು ನಡೆಸಿ ಸಲಹೆ-ಸೂಚನೆ ನೀಡಲಾಗಿದೆ. ಜಾ.ದಳ ನೆಲೆ ಕಳೆದುಕೊಳ್ಳುತ್ತಿದೆ ಎಂದು ಆರೋಪಿಸುವ ಕಾಂಗ್ರೆಸ್ಗೆ ಸಮಾವೇಶದ ಮೂಲಕವೇ ತಿರುಗೇಟು ನೀಡಲು ತೀರ್ಮಾನಿಸಲಾಗಿದೆ.
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…