ರಾಜ್ಯ

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಮೋದಿಯವರು ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್‌ನ ಧ್ಯಾನ ಮಂದಿರ ಉದ್ಘಾಟನೆಗೆ ತೆರಳಿದ್ದ ವೇಳೆ ತಾತಗುಣಿ ಬಳಿ ಇರುವ ಅಗಳನ ಕೆರೆ ಬಳಿ ಶಂಕಿತ ವ್ಯಕ್ತಿಯೊಬ್ಬ ಜಿಲಿಟಿನ್ ಕಡ್ಡಿ ಇಟ್ಟಿದ್ದು ಪತ್ತೆಯಾಯಿತು.

ತಕ್ಷಣವೇ ಇದರ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ನಗರ ಹಾಗೂ ರಾಮನಗರ ಪೊಲೀಸರು ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದರು. ಆರ್ಟ್ ಆಫ್ ಲಿವಿಂಗ್‌ನ ಧ್ಯಾನಮಂದಿರ ಉದ್ಘಾಟನೆ ಹಾಗೂ ರವಿಶಂಕರ್ ಗುರೂಜೀಯವರ ೭೦ನೇ ಹುಟ್ಟುಹಬ್ಬದ ಕಾರ್ಯಕ್ರಮಕ್ಕಾಗಿ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್‌ಗೆ ಆಗಮಿಸಿದ್ದರು.

ಮೋದಿಯವರು ಈ ಮೊದಲು ನಿಗದಿಪಡಿಸಿದಂತೆ 1 ಗಂಟೆ 5 ನಿಮಿಷಕ್ಕೆ ಆರ್ಟ್ ಆಫ್ ಲಿವಿಂಗ್‌ನಿಂದ ಹೊರಟು ರಸ್ತೆ ಮೂಲಕ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿತ್ತು. ಆದರೆ ರಸ್ತೆ ಪಕ್ಕ ಜಿಲಿಟಿನ್ ಕಡ್ಡಿಗಳು ಪತ್ತೆಯಾದ ಪರಿಣಾಮ ಅವರ ಪ್ರಯಾಣದಲ್ಲಿ ತುಸು ವಿಳಂಬವಾಯಿತು. ಪತ್ತೆಯಾದ ಸ್ಥಳದಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ, ಎಸ್‌ಪಿಜಿ, ರಾಜ್ಯ ಪೊಲೀಸ್ ತಂಡ ಜಂಟಿಯಾಗಿ ಕಾರ್ಯಚರಣೆ ನಡೆಸಿ ಜಿಲಿಟಿನ್ ಕಡ್ಡಿಗಳನ್ನು ವಶಕ್ಕೆ ಪಡೆದರು.

ಪೊಲೀಸರ ವಶದಲ್ಲಿರುವ ಶಂಕಿತ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿ ವಿವಿಧ ಆಯಾಮಗಳಲ್ಲಿ ಮಾಹಿತಿ ಪಡೆಯುತ್ತಿದ್ದಾರೆ. ಜಿಲಿಟಿನ್ ಕಡ್ಡಿಗಳು ಅಸಲಿಯೋ, ನಕಲಿಯೋ ಇದರ ಹಿಂದೆ ಯಾವುದಾದರೂ ಉದ್ದೇಶವಿತ್ತೆ? ಈತ ಮಾನಸಿಕವಾಗಿ ಅಸ್ವಸ್ಥನೇ? ಯಾವುದಾದರೂ ಸಂಘಟನೆಗಳ ಪ್ರಭಾವಕ್ಕೆ ಒಳಗಾಗಿ ದೃಷ್ಕೃತ್ಯ ನಡೆಸಲು ಹೊಂಚು ಹಾಕಿದ್ದನೇ ಎಂಬುದು ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆಗೆ ಗುರಿಪಡಿಸಿದ್ದಾರೆ.

ರಸ್ತೆ ಪಕ್ಕದಲ್ಲಿ ಜಿಲಿಟಿನ್ ಕಡ್ಡಿಗಳು ಪತ್ತೆಯಾದ ಪರಿಣಾಮ ಪೊಲೀಸರು ಕೆಲಕಾಲ ಆತಂಕಕ್ಕೆ ಒಳಗಾಗಿ ಆರ್ಟ್ ಆಫ್ ಲಿವಿಂಗ್‌ನಿಂದ ಎಚ್‌ಎಎಲ್ ವಿಮಾನ ನಿಲ್ದಾಣದವರೆಗೆ ಹೈ ಅಲರ್ಟ್ ಘೋಷಿಸಿದ್ದರು.
ಈ ವೇಳೆ ನೋ ಫ್ಲೈಯಿಂಗ್ ಜೋನ್, ದ್ರೋಣ್ ಹಾರಾಟ, ಹೆಲಿಕಾಪ್ಟರ್ ಹಾರಾಟಕ್ಕೂ ನಿರ್ಬಂಧ ವಿಧಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago