ರಾಜ್ಯ

ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ ; ಪ್ರತೀ ಜಿಲ್ಲೆಯಲ್ಲಿಯೂ ಉದ್ಯೋಗ ಮೇಳ : ಸಿ.ಎಂ

ಮೈಸೂರು : ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯ‌ಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಯುವ ಸಮೃದ್ಧಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು. ಈ 11 ವರ್ಷದಲ್ಲಿ 22 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು ಸುಳ್ಳು ಹೇಳಿದರು. ನಾವು ಅವರಂತೆ ಸುಳ್ಳು ಹೇಳುವುದಿಲ್ಲ ಎಂದು ಸರ್ಕಾರದಿಂದ ಭರ್ತಿಯಾದ ಹುದ್ದೆಗಳ ಮತ್ತು ಉದ್ಯೋಗ ಮೇಳದಲ್ಲಿ ಭರ್ತಿಯಾದ ಹುದ್ದೆಗಳ ವಿವರಗಳನ್ನು ನೀಡಿದರು.

ಇದನ್ನು ಓದಿ: ನಾಳೆ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ

ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ‌ ಸರ್ಕಾರ ಬೆಂಗಳೂರಿನಲ್ಲಿ ನಡೆಸಿದ ಉದ್ಯೋಗ ಮೇಳದಿಂದಾಗಿ 58892 ಮಂದಿ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿ ಅನುಕೂಲ, ಅರಿವು ಪಡೆದುಕೊಂಡಿದ್ದಾರೆ. ಇವರಲ್ಲಿ 11507 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 22819 ಅಭ್ಯರ್ಥಿಗಳ ಹೆಸರನ್ನು short list ಮಾಡಲಾಗಿದೆ ಎಂದು ವಿವರಿಸಿದರು.

ಜಿಲ್ಲೆಗಳಲ್ಲಿ ನಡೆದ ಉದ್ಯೋಗ ಮೇಳದಲ್ಲಿ 120563 ಅಭ್ಯರ್ಥಿಗಳು ಭಾಗವಹಿಸಿ, 24391 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 48232 ಅಭ್ಯರ್ಥಿಗಳ ಹೆಸರನ್ನು short list ಮಾಡಲಾಗಿದೆ ಎಂದು ಪಟ್ಟಿ ನೀಡಿದರು.

ಹಿಂದಿನ ಸರ್ಕಾರ ಉದ್ಯೋಗಾಕಾಂಕ್ಷಿಗಳನ್ನು ಸಂಪೂರ್ಣ ನಿರ್ಲಕ್ಷಿಸಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಈ ಎರಡೂವರೆ ವರ್ಷಗಳಲ್ಲಿ ಸರ್ಕಾರದಲ್ಲಿ ಖಾಲಿ ಇದ್ದ 28000 ಉದ್ಯೋಗಗಳನ್ನು ಈಗಾಗಲೇ ಭರ್ತಿ ಮಾಡಿದೆ. 35 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.

ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಸೃಷ್ಟಿಸುವ ಮಹತ್ತರ ಕಾರ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

4 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

5 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

5 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

6 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

7 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

8 hours ago