ಬೆಂಗಳೂರು-200 ತೋಟಗಾರರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದರು.
ಶಾಸಕ ಅಮರೇಗೌಡ ಬಯ್ಯಾಪುರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇಲಾಖೆಯಲ್ಲಿ 200 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಕಳೆದ ಮೇ 8ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿ ಮೇಲೆ ಸಲ್ಲಿಸಿರುವ ಆಕ್ಷೇಪಗಳ ಅರ್ಜಿಗಳು ಪರಿಶೀಲನಾ ಹಂತದಲ್ಲಿದೆ ಎಂದರು.
ಈ ವೇಳೆ ಸಿಟ್ಟುಗೆದ್ದ ಸಭಾಧ್ಯಕ್ಷರು, ನೀವು ಅಭ್ಯರ್ಥಿಗಳಿಗೆ ನೇಮಕಾತಿ ಹುದ್ದೆಗಳನ್ನು ಕೊಡುವುದಿಲ್ಲ. ಕಡೆಪಕ್ಷ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಕೊಡುವುದಿಲ್ಲ ಎಂದರೆ ಅವರು ಎಲ್ಲಿಗೆ ಹೋಗಬೇಕು, ಏನು ಮಾಡಬೇಕು ವಯೋಮಿತಿ ಸಡಿಲಿಕೆಯಾದರೆ ಯಾರು ಹೊಣೆ ಎಂದು ಪ್ರಶ್ನಿಸಿದರು.
ಆಗ ಮುನಿರತ್ನ ಅವರು ಇನ್ನು ಒಂದು ತಿಂಗಳೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ವಿಳಂಬವಾಗುವುದಿಲ್ಲ ಎಂದು ಆಶ್ವಾಸನೆ ಕೊಟ್ಟರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Next Article ನಾಡಹಬ್ಬದಲ್ಲಿ ಸಾಂಸ್ಕೃತಿಕ ವೈಭವಕ್ಕೆ ಕ್ಷಣಗಣನೆ